ಮೂಡಲಗಿ: ಪಟ್ಟಣದಲ್ಲಿ ರಾಜ್ಯೋತ್ಸವ ಅಂಗವಾಗಿ ಬುಧವಾರದಂದು ಮೂಡಲಗಿ ಪಟ್ಟಣದ ಎಸ್.ಎಸ್.ಆರ್ ಕಾಲೇಜು ಮೈದಾನದಲ್ಲಿ ಗಾಳಿಪಟ ಉತ್ಸವ ಹಾಗೂ ಮೂಡಲಗಿ ಪಟ್ಟಣದ ಕಲ್ಮೇಶ್ವರ ಸರ್ಕಲದಲ್ಲಿ ದೀಪಗಳ ಬಲೂನಗಳನ್ನು ಆಚರಿಸುವ ಕಾರ್ಯಕ್ರಮ ತಾಲೂಕಾ ಆಡಳಿತ, ಮೂಡಲಗಿ ಶಿಕ್ಷಣ ಸಂಸ್ಥೆ, ಯುವ ಜೀವನ ಸೇವಾ ಸಂಸ್ಥೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ತಾಲೂಕಾ ಘಟಕದ ಆಶ್ರಯದಲ್ಲಿ ಸಂಭ್ರಮದಿಂದ ಜರುಗಿತು.
ಗಾಳಿಪಟ ಉತ್ಸವಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರ ರಾಜ್ಯಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಗಿತ್ತಿದ್ದು, ಗಾಳಿಪಟ ಉತ್ಸವ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ದೀಪಗಳ ಬಲೂನ ಕಾರ್ಯಕ್ರಮಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವೀಂದ್ರ ಸೋನವಾಲ್ಕರ ಹಾಗೂ ಈಶ್ವರ ಕಂಕಣವಾಡಿ ಪಟ್ಟಣದ ಕಲ್ಮೇಶ್ವರ ಸರ್ಕಲದಲ್ಲಿ ಸಂಜೆ ಜಾಲನೆ ನೀಡಿ ಮಾತನಾಡಿದ, 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ 50 ದೀಪಗಳ ಬಲೂನಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಇಡೀ ತಾಲೂಕಿನ ಜನರ ಮನದಲ್ಲಿ ಕನ್ನಡ ನಾಡು ನುಡಿ ಬಗ್ಗೆ ಜಾಗೃತಿ ಮೂಡಿಸಲಾಯಿತು ಎಂದರು.
ಈ ಸಮಯದಲ್ಲಿ ತಹಶೀಲ್ದಾರ ಶಿವಾನಂದ ಬಬಲಿ, ತಾಪಂ ಕಾರ್ಯನಿವಾರ್ಹಕ ಅಧಿಕಾರಿ ಎಫ್ ಜಿ ಚಿನ್ನನವರ, ಬಿಇಒ ಅಜೀತ ಮನ್ನಿಕೇರಿ, ಗಣ್ಯರಾದ ವೆಂಕಟೇಶ ಸೋನವಾಲ್ಕರ, ಈರಣ್ಣ ಸೋನವಾಲ್ಕರ, ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ ಅಡಿಹುಡಿ, ಕಾನಿಪ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಿರೆನ್ನವರ, ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಓಂ ಸಂತೋಷ, ಪ್ರಧಾನ ಕಾರ್ಯದರ್ಶಿ ಮಲ್ಲು ಬೊಳನ್ನವರ, ಯುವ ಜೀವನ ಸೇವಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬೀರು ವನಶೆಣ್ಣಿ, ವೆಂಕಪ್ಪ ಬಾಲರಡ್ಡಿ, ಈರಪ್ಪ ಢವಳೇಶ್ವರ, ಗುರು ಗಂಗನ್ನವರ, ಬಸವರಾಜ ಕಬ್ಬೂರ, ರಾಜು ಮಗದುಮ್ಮ, ಸುಭಾಷ ಗೋಡ್ಯಾಗೋಳ, ಭಗವಂತ ಉಪ್ಪಾರ. ರಮೇಶ ಉಪ್ಪಾರ, ಸುಭಾಸ ಮನ್ನಿಕೇರಿ, ಮಾಂತು ನೇಸೂರ, ರಾಜು ಭಜಂತ್ರಿ ಮತ್ತು ಸೈನಿಕ ತರಬೇತಿ ಕೇಂದ್ರದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.