spot_img
spot_img

ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ಕೃತಿಹಳ ಆಹ್ವಾನ

Must Read

- Advertisement -

ಸಿಂದಗಿ: ಸಿಂದಗಿಯ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ 2023ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗೆ ಆಸಕ್ತ ಲೇಖಕರು ಮಕ್ಕಳ ಸಾಹಿತ್ಯದ ಕಥೆ, ಕವನ, ಕಾದಂಬರಿ ಈ ಮೂರು ಪ್ರಕಾರಗಳ ಕೃತಿಗಳನ್ನು ಕಳಿಸಬಹುದು. 2023ರಲ್ಲಿ ಪ್ರಕಟಗೊಂಡ ಕೃತಿಯ ನಾಲ್ಕು ಪ್ರತಿಗಳನ್ನು ರಜಿಸ್ಟರ್ಡ ಅಂಚೆ ಅಥವಾ ಕೋರಿಯರ್ ಮೂಲಕ ಕಳುಹಿಸಬೇಕು. ಈ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಕೃತಿಗಳನ್ನು ಮಾರ್ಚ 31ರೊಳಗಾಗಿ ತಲುಪುವಂತೆ ಹ.ಮ. ಪೂಜಾರ, ನಿವೃತ್ತ ಶಿಕ್ಷಕರು, ಶ್ರೀ ಸಂಗಮೇಶ್ವರ ಕಾಲನಿ, ಸಿಂದಗಿ-586 128, ಜಿಲ್ಲಾ ವಿಜಯಪುರ ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ಐದು ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹ.ಮ. ಪೂಜಾರ ಮೊಬೈಲ್ ನಂ.:9448644228ಗೆ ಸಂಪರ್ಕಿಸಬೇಕು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಟಣೆ ತಿಳಿಸಿದೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group