ಸಿಂದಗಿ; ದಿ ೦೭ ರಂದು ಮಧ್ಯಾಹ್ನ ೧ ಗಂಟೆಗೆ ಬಿಇಓ ಕಚೇರಿಯ ಆವರಣದಲ್ಲಿ, ೨೦೨೫-೨೬ ನೇ ಸಾಲಿನಲ್ಲಿ ಮತಕ್ಷೇತ್ರಕ್ಕೆ ಮಂಜೂರಾದ ಎಂಟು ಸರಕಾರಿ ಪ್ರೌಢಶಾಲೆಗಳು ಮತ್ತು ಮುಖ್ಯಮಂತ್ರಿಗಳ ನಗರೋತ್ಥಾನ ಅನುದಾನದಲ್ಲಿ ರೂ.೫೦ ಲಕ್ಷಗಳ ವೆಚ್ಚದಲ್ಲಿ ಗುರುಭವನ ಕಟ್ಟಡದ ಪ್ರಥಮ ಹಂತದ ಕಾಮಗಾರಿಯ ಭೂಮಿ ಪೂಜಾ ಸಮಾರಂಭವನ್ನು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ರವರು ವಹಿಸಿಕೊಳ್ಳಲಿದ್ದಾರೆ.
ಕಾರಣ ಶಿಕ್ಷಕ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಬೇಕು ಎಂದು ಬಿಇಓ ಮಹಾಂತೇಶ ಯಡ್ರಾಮಿ ಪತ್ರಿಕಾ ಪ್ರಕಟಣೆಯ ಮೂಲಕ ಕರೆ ನೀಡಿದ್ದಾರೆ.

