Homeಸುದ್ದಿಗಳುಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗಣ್ಯರಿಂದ ಶುಭ ಹಾರೈಕೆ

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗಣ್ಯರಿಂದ ಶುಭ ಹಾರೈಕೆ

ಸವದತ್ತಿ: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಗಳ ಆರಂಭ ಈ ಸಂದರ್ಭದಲ್ಲಿ ಪಟ್ಟಣದ ಎಸ್ ಕೆ ಪ್ರೌಢಶಾಲೆಯ ಆವರಣದಲ್ಲಿ ಶಾಸಕರಾದಿಯಾಗಿ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತಿಯಲ್ಲಿ ಶುಭ ಕೋರುವ ಕಾರ್ಯ ಜರುಗಿತು.

ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕರಾದ ವಿಶ್ವಾಸ ವೈದ್ಯ, ಎಸ್ ಎಸ್ ಎಲ್ ಸಿ ಪರೀಕ್ಷೆ ಎಲ್ಲರ ಜೀವನದಲ್ಲಿ ಅತಿ ಮುಖ್ಯ ಪರೀಕ್ಷೆ. ಪರೀಕ್ಷಾ ತಯಾರಿ ಶಿಕ್ಷಣ ಇಲಾಖೆಯಿಂದ ಅಚ್ಚುಕಟ್ಟಾಗಿ ಆಗಿದ್ದು ಎಲ್ಲಾ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಎಂ ಎನ್ ಹೆಗ್ಗನ್ನವರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಆನಂದ ಬಡಕುಂದ್ರಿ, ವೈದ್ಯಾಧಿಕಾರಿಗಳಾದ ಡಾ. ಸಬನೀಸ್, ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ ಕುರಿ, ಅಕ್ಷರ ದಾಸೋಹ ಯೋಜನೆಯ ಗಿರೀಶ ಮುನವಳ್ಳಿ, ಪ್ರಶಾಂತ ಹಂಪನ್ನವರ,  ತಾಲೂಕು ಪೋಲೀಸ್ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತಿಯಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ ಹಾರೈಸಿದರು

RELATED ARTICLES

Most Popular

error: Content is protected !!
Join WhatsApp Group