ಬೈಲಹೊಂಗಲ – ಕ.ಸಾ.ಪ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕು ಕಸಾಪ ಘಟಕಗಳ ಸಹಯೋಗದೊಂದಿಗೆ ರವಿವಾರ ದಿ: 06 ರಂದು ಸಂಜೆ 5:30ಕ್ಕೆ, “ಬೆಳಗಾವಿ ಜಿಲ್ಲೆಯ ದೇವಾಲಯಗಳ ವಾಸ್ತುಶಿಲ್ಪ”ಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಗೂಗಲ ಮೀಟನಲ್ಲಿ ನಡೆಯಲಿದೆ.
ವೆಬಿನಾರ್ ಮೂಲಕ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲ್ ವಿ ಪಾಟೀಲ ಮಾಜಿ ಕಸಾಪ ಅಧ್ಯಕ್ಷರು ಹುಕ್ಕೇರಿ ಅವರು ವಹಿಸಲಿದ್ದು. ಹಾಗೂ ಬೆಳಗಾವಿಯ ಇತಿಹಾಸ ತಜ್ಞರಾದ ಡಾ.ಸ್ಮಿತಾ ಸುರೇಬಾನಕರ ಅವರು “ಬೆಳಗಾವಿ ಜಿಲ್ಲೆಯ ದೇವಾಲಯಗಳ ವಾಸ್ತುಶಿಲ್ಪ”ಗಳ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಮೆಟಗುಡ್ಡ ಅವರು ಆಶಯ ನುಡಿಯನ್ನು ಮಂಡಿಸುವರು.
ಕಸಾಪ ರಾಮದುರ್ಗ ತಾಲೂಕಿನ ಅಧ್ಯಕ್ಷರು ಪಾಂಡುರಂಗ ಜಟಗನ್ನವರ ಅವರು ಕಾರ್ಯಕ್ರಮವನ್ನು ಸಂಯೋಜನೆ ಹಾಗೂ ನಿರೂಪಣೆಯನ್ನು ಮಾಡಲಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ ಅಧ್ಯಕ್ಷರುಗಳು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಹಿರಿಯ-ಕಿರಿಯ ಸಾಹಿತಿಗಳು, ಸಮಸ್ತ ಕನ್ನಡಾಭಿಮಾನಿಗಳು ಈ ಕೆಳಗಿನ ಕೊಂಡಿಯನ್ನು ಬಳಸಿಕೊಂಡು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಮೆಟಗುಡ್ಡ ಅವರು ಮತ್ತು ಜಿಲ್ಲಾ ಕಾರ್ಯಕಾರಿ ಸಮೀತಿಯ ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Meeting URL: https://meet.google.com/rch-bxrc-vvm