spot_img
spot_img

ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ

Must Read

- Advertisement -

ಮೂಡಲಗಿ: ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು.

ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ತಮ್ಮ ಅಂಗನವಾಡಿ ವ್ಯಾಪ್ತಿಯಲ್ಲಿ ಪಾಲಕರಿಗೆ ತಿಳಿವಳಿಕೆ ನೀಡಬೇಕು ಮತ್ತು ಬಾಲ್ಯ ವಿವಾಹ ತಡೆಗಟ್ಟಲು ಸಮುದಾಯದವರ ಪಾತ್ರ ಬಹಳ ಮುಖ್ಯವಾಗಿದೆ ಎಂದ ಅವರು ಬಾಲ್ಯ ವಿವಾಹದ ದುಷ್ಪರಿಣಾಮವನ್ನು ಮತ್ತು ಕಾನೂನುಗಳನ್ನು ವಿವರಿಸಿದರು.

ಸಮಾರಂಭದಲ್ಲಿ ಪಟ್ಟದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಪಾಲಕರು, ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತಿತರು ಭಾಗವಹಿಸಿದರು.
ಅಂಗನವಾಡಿ ಕಾರ್ಯಕರ್ತೆ ಮಾಲತಿ ಸಪ್ತಸಾಗರ ನಿರೂಪಿಸಿ ವಂದಿಸಿದರು.

- Advertisement -
- Advertisement -

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -

More Articles Like This

- Advertisement -
close
error: Content is protected !!
Join WhatsApp Group