ಲೇಖಕಿಯರ ಸಂಘದ ವತಿಯಿಂದ ಸಾಹಿತಿ ರೇಣುಕಾ ಜಾಧವ ಅವರ ಅವಳಿ ಕೃತಿಗಳ ಲೋಕಾರ್ಪಣೆ

Must Read

ಇದೇ ದಿ. 21 ರಂದು ಗುರುವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸಾಹಿತಿ ರೇಣುಕಾ ಜಾಧವ ರಚಿಸಿದ ‘ಅಮ್ಮ’ ಮತ್ತು ‘ಓ ನನ್ನ ಕಂದ ಅರುಣ’ ಅವಳಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ವಹಿಸಲಿದ್ದು ಹಿರಿಯ ಸಾಹಿತಿ ಬಿ.ಎಸ್. ಗವಿಮಠ ಕೃತಿ ಲೋಕಾರ್ಪಣೆ ಮಾಡುವರು. ಪ್ರಾಧ್ಯಾಪಕರಾದ ಡಾ.ಶೋಭಾ ನಾಯಿಕ ಮತ್ತು ಡಾ. ಭಾರತಿ ಮಠದ ಕೃತಿಗಳನ್ನು ಪರಿಚಯಿಸುವರು. ಹಿರಿಯ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಪ್ರಾಸ್ತಾವಿಕ ನುಡಿಗಳನ್ನಾಡುವರು. ಅತಿಥಿಗಳಾಗಿ ಸಾಹಿತಿ ಶಾಂತಾದೇವಿ ಹುಲೆಪ್ಪನವರಮಠ ಆಗಮಿಸುವರು.

ಸಾಹಿತ್ಯಾಸಕ್ತರು ಮತ್ತು ಕನ್ನಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಬೇಕೆಂದು ಸಂಘದ ಕಾರ್ಯದರ್ಶಿ ರಾಜನಂದಾ ಘಾರ್ಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group