Homeಸುದ್ದಿಗಳುಪದವಿ ಶಿಕ್ಷಣ ಸರಿಯಾದರೆ ಬದುಕು ನಿರ್ಮಾಣವಾಗುತ್ತದೆ - ಡಾ. ಅರವಿಂದ ಮನಗೂಳಿ

ಪದವಿ ಶಿಕ್ಷಣ ಸರಿಯಾದರೆ ಬದುಕು ನಿರ್ಮಾಣವಾಗುತ್ತದೆ – ಡಾ. ಅರವಿಂದ ಮನಗೂಳಿ

ಸಿಂದಗಿ: ವಿದ್ಯಾರ್ಥಿಗಳ ಭವಿಷ್ಯತ್ತನ್ನು ರೂಪಿಸುವ ನೈಜವಾದ ಕಳಕಳಿಯನ್ನು ಸಾರಂಗಮಠದ ಪೂಜ್ಯರು ಹೊಂದಿದ್ದಾರೆ ಎಂದು ಸಿ.ಎಂ.ಮನಗೂಳಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.

ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀಪದ್ಮರಾಜ ಮಹಿಳಾ ಪದವಿ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿ ಮಾತನಾಡಿದ ಅವರು, ಲಿಂ.ಚನ್ನವೀರ ಸ್ವಾಮೀಜಿಗಳು ಹಾಕಿಕೊಟ್ಟ ಮಾರ್ಗದಲ್ಲಿಯೇ ಇಂದಿನ ಪೂಜ್ಯರು ನಡೆದುಕೊಳ್ಳುತ್ತಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಉನ್ನತ್ತ ಮಟ್ಟದಲ್ಲಿ ಬೆಳಸುತ್ತಿದ್ದಾರೆ. ರಾಜ್ಯದಲ್ಲಿ ಪುರಾಣ-ಪ್ರವಚನ, ಸಭೆ-ಸಮಾರಂಭ, ಯೋಗ ಶಿಬಿರಗಳು ಆಗುತ್ತಿವೆ ಆದರೂ ಅಪರಾಧಗಳ ಸಂಖ್ಯೆ ಮಾತ್ರ ಕಡಿಮೆಯಾಗದೆ ಇರುವುದು ವಿಷಾದನೀಯ. ಕಾರಣ ಪದವಿ ಶಿಕ್ಷಣ ಸರಿಯಾದರೆ ಬದುಕು ನಿರ್ಮಾಣ. ಒಂದು ವೇಳೆ ಸರಿಯಾಗದಿದ್ದರೆ ಬದುಕೇ ನಿರ್ನಾಮ ಹಾಗಾಗಿ ನಿಮ್ಮ ಬದುಕನ್ನು ಬದಲಾವಣೆ ಮಾಡುವುದೇ ಪದವಿ ಶಿಕ್ಷಣ. ಶಾಂತಿ, ಸತ್ಯ, ಅಹಿಂಸೆ ಮಾರ್ಗದಿಂದ ಮೊದಲು ಎಲ್ಲವನ್ನು ಪಾಲಿಸೋಣ ಕೊನೆಯಲ್ಲಿ ಯಾವುದಕ್ಕೂ ಜಗ್ಗದೇ ಹೋದಾಗ ಶಸ್ತ್ರ ಮಾರ್ಗ ಬಳಸುವುದು ಅನಿವಾರ್ಯವಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚೆಚ್ಚು ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳುತ್ತಾ ಮಹಾವಿದ್ಯಾಲಯದ ಗ್ರಂಥಾಲಯಕ್ಕೆ ೨೧ ಸಾವಿರ ರೂ.ಗಳನ್ನು ಪುಸ್ತಕಗಳ ಖರೀದಿಗಾಗಿ ನೀಡಿದರು.

ಈ ವೇಳೆ ಅತಿಥಿಗಳಾಗಿ ಆಗಮಿಸಿದ ಸುಜಾತಾ ಶಿವುಮಠ ಹಾಗೂ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಈ ಸಂಸ್ಥೆಯ ನೀಡುವ ಎಲ್ಲ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸ್ವ-ಉದ್ಯೋಗಗಳನ್ನು ಮುಂದುವರೆಸಿಕೊಂಡು ಹೋಗಬೇಕು. ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಬೆಳೆಯಬೇಕು. ಮಹಿಳಾ ವಿಶ್ವವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಒಳಗೊಂಡಂತೆ ಅನೇಕ ಕೋರ್ಸ್ಗಳಿಗೆ ಸೇರಿ ಅವುಗಳ ಸದುಪಯೋಗವನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳಬೇಕು. ಮಹಿಳಾ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ. ಉನ್ನತ ಶಿಕ್ಷಣವನ್ನು ಪಡೆದುಕೊಂಡು ಸಂಸ್ಥೆಯ ಮತ್ತು ಕಾಲೇಜಿನ ಕೀರ್ತಿ ಬೆಳಗಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ವೇಳೆ ಮಹಿಳಾ ವಿಶ್ವವಿದ್ಯಾಲಯಕ್ಕೆ ರ‍್ಯಾಂಕ್ ಬಂದ ಬಿಎಸ್‌ಡಬ್ಲೂ ವಿಭಾಗದ ೧೦ಜನ ವಿದ್ಯಾರ್ಥಿಗಳಿಗೂ ಹಾಗು ಕಂಪನ್ ದ್ರಾವಿಡ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ಡಾ. ರವಿ ಗೋಲಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಪಾವನ ಸಾನ್ನಿಧ್ಯ ವಹಿಸಿದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಚೇರಮನ್ನರು ಗುರುಕುಲ ಭಾಸ್ಕರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಎಸ್.ಎಂ. ಪೂಜಾರಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಅನೀಲಕುಮಾರ ರಜಪೂತ, ಎಸ್.ಎಮ್.ಹೂಗಾರ, ಎಮ್.ಕೆ.ಬಿರಾದಾರ, ಎಸ್.ಸಿ ದುದ್ದಗಿ, ಜಿ.ವಿ ಪಾಟೀಲ, ಹೇಮಾ ಹಿರೇಮಠ, ಮಂಗಳಾ ಈಳಗೇರ, ಡಿ.ಎಂ.ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ಮಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಈ ವೇಳೆ ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಯು.ಸಿಪೂಜೇರಿ ವರದಿ ವಾಚಿಸಿದರು. ಉಪನ್ಯಾಸಕ ಎಸ್.ಸಿ.ದುದ್ದಗಿ ಸ್ವಾಗತಿಸಿದರು. ವಿದ್ಯಾರ್ಥಿ ಕಾಂಚನಾ ಪ್ರಾರ್ಥಿಸಿದರು. ಪ್ರಿಯಾಂಕ ಕಕ್ಕಳಮೇಲಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕಾವೇರಿ ರೇವೂರ ವಂದಿಸಿದರು.

RELATED ARTICLES

Most Popular

error: Content is protected !!
Join WhatsApp Group