spot_img
spot_img

ಜಾತ್ರಾ ಪದ್ಧತಿಯಿಂದ ಬದುಕು ಸುಲಭವಾಗಿದೆ- ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ಭಾರತ ದೇಶದಲ್ಲಿ ಜಾತ್ರಾ ಪದ್ದತಿ ಎನ್ನುವಂತಹದ್ದು ನಂಬಿಕೆಗಳ ಆಧಾರದ ಮೇಲೆ ನಿಂತಿದೆ. ಹೀಗಾಗಿ ಶ್ರದ್ದೆ, ಭಕ್ತಿ ನಂಬಿಕೆಯನ್ನು ಉಳಿಸಿಕೊಂಡು ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಸುವ್ಯವಸ್ಥೆಯಿಂದ ನಾವು ಬದುಕು ನಡೆಸಲು ಅನುಕೂಲವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಶನಿವಾರ ಮಾ-10 ರಂದು ಕುಲಗೋಡ ಗ್ರಾಮದ ಆರಾಧ್ಯ ದೇವತೆ ಶ್ರೀ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮಕ್ಕೆ ಭೇಟಿ ನೀಡಿ, ದೇವಿಗೆ ಉಡಿ ತುಂಬಿ, ಪೂಜೆ ಸಲ್ಲಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ಪ್ರತಿ ಐದು ವರ್ಷಕ್ಕೊಮ್ಮೆ ಜರುಗುವ ಜಾತ್ರಾ ಮಹೋತ್ಸವವನ್ನು ಗಾಮಸ್ಥರು ಅತ್ಯಂತ ವೈಭವ, ವಿಜೃಂಭಣೆ, ಭಕ್ತಿಪೂರ್ವಕವಾಗಿ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಈ ರೀತಿ ಜಾತ್ರಾ ಮಹೋತ್ಸವಗಳನ್ನು ಮೊದಲಿನಿಂದ ಸಡಗರ ಮತ್ತು ಸಂಭ್ರಮದಿಂದ ನಡೆಯುತ್ತಿವೆ ಎಂದರು. 

ಈ ಸಂದರ್ಭದಲ್ಲಿ ತಮ್ಮಣ್ಣ ದೇವರ, ಸುಭಾಸ ವಂಟಗೂಡಿ, ಸತೀಶ ವಂಟಗೂಡಿ, ವಾಸು ಬಡಿಗೇರ, ರಮೇಶ ಕೌಜಲಗಿ, ರಮೇಶ ಬಡಕಲ್, ಬಸನಗೌಡ ಪಾಟೀಲ, ಬಸವರಾಜ ಯಕ್ಸಂಬಿ, ಗೋವಿಂದಗೌಡ ಪಾಟೀಲ ಸೇರಿದಂತೆ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group