- Advertisement -
ಬೀದರ: ಬಸವಕಲ್ಯಾಣ ತಹಶೀಲ್ದಾರ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ ನಡೆದಿದ್ದು ಹಣ ಪಡೆಯುವಾಗ ತಹಶೀಲ್ದಾರರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ
ಶಿವಾನಂದ ಬಿರಾದಾರ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಅಧಿಕಾರಿ. ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದ ನಾಡ ತಹಶೀಲ್ದಾರ ಬಿರಾದಾರ ಅವರು ಒಂದು ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ.
ಮುಚ್ಚಿಳಮ ಗ್ರಾಮದ ಸುಧೀರ್ ಎಂಬುವವರ ದೂರಿನ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಜಮೀನು ಪಹಣಿಗಾಗಿ ಅಧಿಕಾರಿಯು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.ಲೋಕಾಯುಕ್ತ ಡಿವೈಎಸ್ಪಿ ಎನ್. ಎಮ್ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.
- Advertisement -
ವರದಿ: ನಂದಕುಮಾರ ಕರಂಜೆ, ಬೀದರ