spot_img
spot_img

‘ಸಮ್ಮಿಲನ’ದಿಂದ ಪ್ರೇಮ ಕವಿಗೋಷ್ಠಿ- ಪ್ರೇಮ ಗೀತಗಾಯನ ಹಾಗು ಪ್ರಶಸ್ತಿ ಪ್ರದಾನ

Must Read

- Advertisement -

ಕಲೆ -ಸಾಹಿತ್ಯ -ಸಾಂಸ್ಕೃತಿಕ ವೇದಿಕೆ ‘ಸಮ್ಮಿಲನ’ ವತಿಯಿಂದ 252ನೇ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಫೆ. 13, ಭಾನುವಾರ ದಂದು ನಗರದ ಶೇಷಾದ್ರಿಪುರ ಅಂಚೆ ಕಚೇರಿ ಪಕ್ಕದ ಕೆನ್ ಕಲಾ ಶಾಲೆಯಲ್ಲಿ ಪ್ರೇಮ ಕವಿಗೋಷ್ಠಿ- ಪ್ರೇಮ ಗೀತಗಾಯನ ಹಾಗು ಪ್ರಶಸ್ತಿ ಪ್ರದಾನ ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಕನ್ನಡ ಪುಸ್ತಕ ಪರಿಚಾರಕ , ಸಮ್ಮಿಲನ ಸಂಸ್ಥಾಪಕ ಕುವರ ಯಲ್ಲಪ್ಪ ರವರು ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ ‘ಶಾರದಾ ಸುಪುತ್ರ ಪ್ರಶಸ್ತಿ’ ಹಾಗು ಕಲಾವಿದ ಕೆ.ಜಿ.ಸಂಪತ್ಕುಮಾರ್ ರವರಿಗೆ ‘ಗಾಯಕ ಎಸ್.ಯಲ್ಲಪ್ಪ ಸ್ಮಾರಕ ಪ್ರಶಸ್ತಿ’ ನೀಡಿ ಗೌರವಿಸಿದರು.

ಖ್ಯಾತ ಕವಿ, ಕತೆಗಾರ ಜಯಶಂಕರ್ ಪ್ರಕಾಶ್ ಬೆಮೆಲ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಅಪರಿಮಿತ ಜೀವನೋತ್ಸಾಹವಿರುವ ಹಿರಿಯ ಚೇತನಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಕಲ್ಪಿಸಿ, ಭಾವನೆಗಳಿಗೆ ಅಕ್ಷರ ರೂಪಕೊಟ್ಟು ,ಸಾಮಾಜಿಕ ಸ್ಥಿತ್ಯಂತರಗಳಿಗೆ ದನಿಯಾದ ವಿಶಿಷ್ಠ ಕಾರ್ಯಕ್ರಮದಲ್ಲಿ ಹಳೆಬೇರು ಹೊಸಚಿಗುರು ಎಂಬಂತೆ ಸಾಧಕರನ್ನು ಗೌರವಿಸಿರುವುದು ಅಭಿನಂದನೀಯ ಎಂದು ತಿಳಿಸಿದರು.

- Advertisement -

ಹಿರಿಯ ಸಾಹಿತಿ – ಗಾಯಕ ಟಿ.ಕೆ.ವೆಂಕಟರಾಮ್ ಭಾರತಿ , ಕವಿಯತ್ರಿ ಹಾ.ವಿ.ಮಂಜುಳಾ ಶಿವಾನಂದ , ಪ್ರಭಾಕರ ಗಂಗೊಳ್ಳಿ, ಗುಡಿಬಂಡೆ ಮಧುಸೂಧನ ಇನ್ನಿತರ 30ಕ್ಕೂ ಅಧಿಕ ಸಾಹಿತ್ಯಾಸಕ್ತರು ಕವಿಗೋಷ್ಠಿ ಯಲ್ಲಿ ಭಾಗವಹಿಸಿದ್ದರು.


ವಿವರಗಳಿಗೆ: 9972652804

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group