ಮಹಾತ್ಮರ ನುಡಿಗಳು ಜೀವನದಲ್ಲಿ ಸನ್ಮಾರ್ಗವನ್ನು ತೋರಿ ನಮ್ಮನ್ನು ಮುಕ್ತರನ್ನಾಗಿ ಮಾಡುತ್ತವೆ – ಮುಕ್ತಾನಂದ ಸ್ವಾಮೀಜಿ

Must Read

ಮುನವಳ್ಳಿ : ಪಟ್ಟಣದ ಶ್ರೀ ಸೋಮಶೇಖರ ಮಠದ ಹಿಂದಿನ ಪೂಜ್ಯರಾದ ಲಿಂ. ಬಸವಲಿಂಗ ಮಹಾಸ್ವಾಮಿಗಳ ೬೬ನೇ ಜಯಂತಿ ಉತ್ಸವದ ಅಂಗವಾಗಿ ಜರುಗುತ್ತಿರುವ ೪ ನೇ ದಿನದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯವನ್ನು ಅವರಾದಿಯ ಶ್ರೀ ಶಿವಮೂರ್ತಿ ಸ್ವಾಮೀಜಿ ವಹಿಸಿ ಮಾತನಾಡುತ್ತ, ಗಣರಾಜ್ಯೋತ್ಸವ ಈ ಶುಭ ಸಂದರ್ಭದಲ್ಲಿ ನಮ್ಮ ಸಂವಿಧಾನ ರಚನೆಗೆ ಮೂಲ ಪರಿಕಲ್ಪನೆ ಇರುವುದು ಅನುಭವ ಮಂಟಪದ ಕಾರಣೀಕರ್ತರಾದ ಶಿವಶರಣರು. ಈಗಿನ ಲೋಕಸಭೆಯ ಪರಿಕಲ್ಪನೆಯನ್ನು ಆಗಿನ ಶಿವಶರಣರು ನಮಗೆಲ್ಲ ನೀಡಿದ್ದರು ಎಂದರು.

ಶಿಂದೋಗಿ ಮುನವಳ್ಳಿಯ ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮದ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡುತ್ತ, ಮಹಾತ್ಮರ ನುಡಿಗಳು ಜೀವನದಲ್ಲಿ ಸನ್ಮಾರ್ಗವನ್ನು ತೋರಿ ನಮ್ಮನ್ನು ಮುಕ್ತರನ್ನಾಗಿ ಮಾಡುತ್ತವೆ. ಮಹಾತ್ಮರ ಸೇವೆಯನ್ನು ಮಾಡುತ್ತ ಅವರ ಕಾರುಣ್ಯವನ್ನು ಪಡೆದುಕೊಳ್ಳಬೇಕು ಎಂದರು. ಮಾದನಹಿಪ್ಪರಗಿಯ ಶ್ರೀ ಅಭಿನವ ಶಿವಲಿಂಗ ಸ್ವಾಮೀಜಿ ಮಾತನಾಡಿದರು.

ಗುಳೇದಗುಡ್ಡದ ಶ್ರೀ ಒಪ್ಪತ್ತೇಶ್ವರ ಮಠದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿಗಳು ಮಾತನಾಡುತ್ತ, ಗಿಡಮರಗಳನ್ನು ನಾವು ಬೆಳೆಸುವುದರಿಂದ ಸಾಕಷ್ಟು ಆಮ್ಲಜನಕ, ಹಣ್ಣು ಹಂಪಲುಗಳು, ನೆರಳು ಸಿಗುತ್ತವೆ. ವೃಕ್ಷಗಳನ್ನು ಬೆಳೆಸಿ ಅವುಗಳ ಮೂಲಕ ತಮ್ಮ ಜೀವನವನ್ನು ಸಾರ್ಥಕ ಮಾಡಿಕೊಂಡ ಸಾಲುಮರದ ತಿಮ್ಮಕ್ಕ ಮೊದಲಾದವರು ನಮಗೆ ಆದರ್ಶ ಪ್ರಾಯವಾಗಿದ್ದಾರೆ ಎಂದರು.

ಕಾರ್ಯಕ್ರಮದ ನೇತೃತ್ವ ವಹಿಸಿದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳನ್ನು ಭಕ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗುರುವಂದನೆ ಸಲ್ಲಿಸಿದರು. ವೀರೇಶ ಬ್ಯಾಹಟ್ಟಿ, ಉಮೇಶ ಬಡಿಗೇರ, ಮಹಾದೇವ ಅಂಗಡಿ, ಅಶೋಕ ಬಡಿಗೇರ, ರವಿಕುಮಾರ ಅಣ್ಣಿಗೇರಿ ಇವರನ್ನು ಸನ್ಮಾನಿಸಲಾಯಿತು.

ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾಕೇಂದ್ರದ ಯೋಗಪಟುಗಳಿಂದ ಯೋಗ ಪ್ರದರ್ಶನ, ದೇಶಭಕ್ತಿ ಗೀತೆ ನೃತ್ಯ ಪ್ರದರ್ಶನ, ಜರುಗಿತು. ಬಿ.ಬಿ.ಹುಲಿಗೊಪ್ಪ ಸ್ವಾಗತಿಸಿದರು. ಗಂಗಾಧರ ಗೊರಾಬಾಳ ನಿರೂಪಿಸಿದರು. ಮಂಜುನಾಥ ಭಂಡಾರಿ ವಂದಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಸದ್ಭಕ್ತರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group