ಬೀದರ – ಮುಂಬರುವ ವಿಧಾನ ಸಭಾ ಚುನಾವಣೆ ಕನಸು ಹೊತ್ತುಕೊಂಡು ನಡೆಯುತ್ತಲಿರುವ ಜನತಾ ಜಲಧಾರೆ ಕಾರ್ಯಕ್ರಮದ ಬೀದರ ಜಿಲ್ಲಾ ಸಮಾವೇಶ ನಾಳೆ ಕಮಠಾಣದಲ್ಲಿ ನಡೆಯಲಿದೆ.
ಈ ಜನತಾ ಜಲಧಾರೆ ರಥ ಯಾತ್ರೆಯ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳಲು ಶಾಸಕ ಬಂಡೆಪ್ಪ ಖಾಶೆಂಪುರ ಮನವಿ ಮಾಡಿಕೊಂಡಿದ್ದಾರೆ.
ಜನತಾ ಜಲಾಧಾರೆ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ , ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಸೇರಿದಂತೆ ಪಕ್ಷದ ಅನೇಕ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಈ ಕಾರಣಕ್ಕಾಗಿ ಪಕ್ಷದ ಕಾರ್ಯಕರ್ತರು ಹಾಗು ಮುಖಂಡರು,ಕ್ಷೇತ್ರದ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜನತಾ ಜಲಧಾರೆ ರಥ ಯಾತ್ರೆಯ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಸನ್ಮಾನ್ಯ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ