ದಿಶಾ ಕಮಿಟಿಗೆ ಮಂಗಲಾ ಕೌಜಲಗಿ ನೇಮಕ

Must Read

ಮೂಡಲಗಿ: ಭಾರತ ಸರ್ಕಾರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಬೆಳಗಾವಿಯ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ ಸಮಿತಿ)ಗೆ ನಾಮನಿರ್ದೇಶಕರಾಗಿ ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಮಂಗಳಾ ಸುರೇಶ ಕೌಜಲಗಿ ಅವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಆದೇಶ ಮೇರಗೆ ಕೇಂದ್ರ ದಿಶಾ ಸಮಿತಿಯ ಜಂಟಿ ನಿರ್ದೇಶಕ ಉಮೇಶ ಕುಮಾರ ರಾಮ ನೇಮಕ ಮಾಡಿ ಆದೇಶಿಸಿದ್ದಾರೆ.

ಮಂಗಲಾ ಸುರೇಶ ಕೌಜಲಗಿ ಅವರು ಭಾರತೀಯ ಜನತಾ ಪಕ್ಷದ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ. ಅರಭಾವಿ ಬ್ಲಾಕ ಅಧ್ಯಕ್ಷರಾಗಿ, ನಾಗನೂರ ಪಟ್ಟಣ ಪಂಚಾಯತ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಸದ್ಯ ಬೆಳಗಾವಿ ಜಿಲ್ಲಾ ಬಿಜೆಪಿ ಪಕ್ಷ ಸಲಹಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನೇಮಕಕ್ಕೆ ಕೌಜಲಗಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದಾರೆ.

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group