ಮೋದಿಗೆ ಭೇಟಿಯಾಗಲು ಪಾದಯಾತ್ರೆ ಹೊರಟ ಬೆಂಡೋಣಿ ಗ್ರಾಮದ ಮಂಜುಳ ನಗಿಮುಖ.

Must Read

ಬಾಗಲಕೋಟೆ: ಲಿಂಗಸಗೂರು ತಾಲೂಕ ಬೆಂಡೋಣಿ ಗ್ರಾಮದ ಮಹಿಳೆ ಮಂಜುಳ ನಗಿಮುಖ. ಹಲವಾರು ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ನೇರವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರೊಂದಿಗೆ ನೇರವಾಗಿ ಮಾತನಾಡಿ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಸದುದ್ದೇಶದಿಂದ ತಮ್ಮ ಗ್ರಾಮ ಬೆಂಡೋಣಿ ಯಿಂದ ಕಂದಗಲ್ಲ ಕುಷ್ಟಗಿ ಮಾರ್ಗವಾಗಿ ಉಡುಪಿ ತಲುಪಿ ಅಲ್ಲಿ ಶ್ರೀ ಕೃಷ್ಣ ಮಂದಿರದ ದೇವಾಲಯದ ಆವರಣದಲ್ಲಿ ಮೋದಿಜಿಯವರನ್ನು ಭೇಟಿಯಾಗಲೆಂದು ಅಂದಾಜು 462 ಕಿ ಮೀ ನಡೆಯುತ್ತಿದ್ದಾಳೆ.

ಅತ್ಯಾಚಾರಿಗಳಿಂದ ಮತ್ತು ಲವ್ ಜಿಹಾದದಿಂದ್ ಮುಕ್ತಿ, ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಗೂ ಸ್ಪೋಕನ್ ಇಂಗ್ಲೀಷಗೆ ಆದ್ಯತೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಪ್ರಧಾನ ಮಂತ್ರಿಗಳು ಶಕ್ತಿಯಾಗಿ ನಿಲ್ಲಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ಪಾದಯಾತ್ರೆ ಕೈಗೊಂಡಿರುವ ಈ ಮಹಿಳೆಯ ಸಾಹಸ ಮೆಚ್ಚುವಂತಹದು.

ಜಿಲ್ಲೆಯ ಇಲಕಲ್ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಈ ಮಹಿಳೆ ಪಾದಯಾತ್ರೆ ಹೋಗುವದನ್ನು ಕಂಡ ಗ್ರಾಮದ ಹಿತಚಿಂತಕ್ ಸಂಗಣ್ಣ ಹವಾಲ್ದಾರ್ ಈ ಮಹಿಳೆಯ ಕೆಲಸ ಮೆಚ್ಚಿ ತಮ್ಮ ಸಂಸ್ಥೆ ವಿಶ್ವ ಚೇತನ ಪಬ್ಲಿಕ್ ಶಾಲೆಯ ಗುರುಮಹಾಂತ ರಂಗಮಂದಿರದಲ್ಲಿ ಸನ್ಮಾನಿಸಿ ಧೈರ್ಯ ತುಂಬಿ ಬೀಳ್ಕೊಟ್ಟರು. ಶಾಲೆಯ ಎಲ್ಲ ಗುರುಗಳು ವಿದ್ಯಾರ್ಥಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group