ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಜ.30 ರಂದು “ಹುತಾತ್ಮರ ದಿನ” ಆಚರಣೆ ಮಾಡಲಾಯಿತು.ಮುಂಜಾನೆ 11 ಗಂಟೆಗೆ 2 ನಿಮಿಷಗಳ ಮೌನಾಚರಣೆ ಮಾಡಲಾಯಿತು.ಪ್ರತಿ ವರ್ಷ ಜನವರಿ 30 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ.
ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸುವ ದಿನವಾಗಿದೆ. ಈ ದಿನದಂದು ಬೆಳಗ್ಗೆ 11 ಗಂಟೆಗೆ ದೇಶಾದ್ಯಂತ ಎರಡು ನಿಮಿಷಗಳ ಮೌನ ಆಚರಿಸಲಾಗುತ್ತದೆ.
ಉಪನಿರ್ದೇಶಕರಾದ ರಾಮಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರಿಗೆ ಗೌರವ ಮತ್ತು ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಕ್ಕಾಗಿ ಪ್ರಾಣ ಅರ್ಪಿಸಿದ ಸೈನಿಕರ ತ್ಯಾಗವನ್ನು ಸ್ಮರಿಸುವುದು ಈ ದಿನದ ಉದ್ದೇಶವಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಂಥಪಾಲಕರಾದ ಎಸ್ ಎಸ್ ಸೀಮಿಮಠ, ಆನಂದ ಮುತಗಿ, ಸುಮಿತ್ ಕಾವಳೆ, ಪ್ರಕಾಶ ಇಚಲಕರಂಜಿ, ಸುನಿಲಕುಮಾರ್, ಸಂಗೀತಾ ನಾವಿ, ಇ ಎನ್ ಅಂಬೇಕರ,ಮತ್ತು ಎಲ್ಲ ಸಿಬ್ಬಂದಿ, ಓದುಗರು ಹಾಜರಿದ್ದು,ಗೌರವ ನಮನ ಸಲ್ಲಿಸಿದರು.

