ಬನವಾಸಿಯಲ್ಲಿ ಕಾರ್ಯಕರ್ತರಿಂದ ಸಚಿವರಿಗೆ ಅದ್ದೂರಿ ಸ್ವಾಗತ

Must Read

ಬನವಾಸಿ: ಸಚಿವ ಸಂಪುಟಕ್ಕೆ ಎರಡನೇ ಬಾರಿ ಆಯ್ಕೆಯಾದ ನಂತರ ಬನವಾಸಿಗೆ ಮೊದಲ ಬಾರಿ ಭೇಟಿ ನೀಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರನ್ನು ಸ್ಥಳೀಯ ಕದಂಬ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡರು.

ಸಚಿವರು ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಸಾಮಾಜಿಕ ಅಂತರ ಮರೆಯುವುದರ ಜೊತೆಗೆ ಹಾರ ತುರಾಯಿಗಳಿಗೆ ದುಂದುವೆಚ್ಚ ಮಾಡುವುದನ್ನು ಮುಖ್ಯಮಂತ್ರಿಗಳು ನಿಷೇಧಿಸಿದ್ದರು ಅದ್ಯಾವುದನ್ನು ಲೆಕ್ಕಿಸದೇ ಅಭಿಮಾನದಿಂದ ನೂರಾರು ಬಿಜೆಪಿ ಕಾರ್ಯಕರ್ತರು ಡೊಳ್ಳು ಬಾರಿಸುತ್ತ ಪಟಾಕಿ ಸಿಡಿಸಿ ಭಾರಿ ಗಾತ್ರದ ಹೂ ಮಾಲೆಗಳನ್ನು ಹಾಕುವುದರೊಂದಿಗೆ ವಿಧವಿಧದ ಹೂಗಳ ಸುರಿಮಳೆಗೈದು ತಮ್ಮ ನೆಚ್ಚಿನ ನಾಯಕನಿಗೆ ಅದ್ದೂರಿ ಸ್ವಾಗತ ಮಾಡಿದರು.

ನಂತರ ಸಚಿವರು ಬನವಾಸಿಯ ಶ್ರೀ ಉಮಾಮಧುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಸಮಿತಿಯಿಂದ ಮತ್ತು ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ರಾಜಶೇಖರ ಒಡೆಯರ್, ಉಪಾಧ್ಯಕ್ಷರು ವಿ.ವಿ. ಮಂಗಳೂರ, ಕಾರ್ಯದರ್ಶಿ ಪ್ರಕಾಶ್ ಬಂಗ್ಲೆ, ಶಿವಯೋಗಿ ಉಳ್ಳಾಗಡ್ಡಿ, ಜಯಶಂಕರ ಮೇಸ್ತ್ರಿ, ಶಿರಸಿ ಎಪಿಎಮ್‍ಸಿ ಅಧ್ಯಕ್ಷ ಶಿವಕುಮಾರ ದೇಸಾಯಿ ಗೌಡರ್, ಬಿಜೆಪಿ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಗ್ರಾಪಂ ಅಧ್ಯಕ್ಷೆ ತುಳಸಿ ಆರೇರ, ಪಿಎಸ್‍ಐ ಹನುಮಂತ ಅರಣ್ಯಧಿಕಾರಿ ಉಷಾ ಕಬ್ಬೆರ, ಗಣಪತಿ ನಾಯ್ಕ್ ಭಾಶಿ, ಚಂದ್ರಶೇಖರ ಗೌಡ ಕಡಗೋಡ, ಸಿದ್ದು ನೆರಗಲ್, ಅಶೋಕ ಪೊನ್ನಪ್ಪ, ಪ್ರೇಮ್‍ಕುಮಾರ್ ನಾಯ್ಕ್, ಸಾಯಿರಾಮ್ ಕಾನಳ್ಳಿ, ಪ್ರಶಾಂತ ಸಂತೊಳ್ಳಿ, ಬಸವರಾಜ್ ನಾಯ್ಕ್ ಭಾಶಿ ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group