- Advertisement -
ಬೀದರ – ಅಪಘಾತವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ನೀಡಿ ಸಚಿವರು ಮಾನವೀಯತೆ ಮೆರೆದ ಘಟನೆ ವರದಿಯಾಗಿದೆ.
ಪಶು ಸಂಗೋಪನೆ ಹಾಗೂ ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಅವರು ತಮ್ಮ ಔರಾದ (ಬಾ) ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡುವ ವೇಳೆಯಲ್ಲಿ ರಸ್ತೆ ಮಾರ್ಗದಲ್ಲಿ ಅಪಘಾತವಾಗಿ ಸಾವರಗಾಂವ ಗ್ರಾಮದ ಓರ್ವ ಮಹಿಳೆಗೆ ತುಂಬಾ ಪೆಟ್ಟು ಬಿದ್ದಿದ್ದನ್ನು ಕಂಡು ವಾಹನ ನಿಲ್ಲಿಸಿ ಅವರ ಆರೋಗ್ಯ ವಿಚಾರಿಸಿದ್ದಲ್ಲದೆ ಸ್ಥಳದಲ್ಲೇ 10 ಸಾವಿರ ರೂಪಾಯಿ ನಗದು ನೀಡಿ ತಮ್ಮ ಜೊತೆಯಲ್ಲಿದ್ದ ಕಾರ್ಯಕರ್ತರಿಗೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಹೇಳಿದರು.
ಅಲ್ಲದೆ ಕುಟುಂಬದ ಸದಸ್ಯರಿಗೆ ನೀವು ಗಾಬರಿಯಾಗಬೇಡಿ ನಿಮ್ಮ ಜೊತೆ ನಾನು ಇರುತ್ತೇನೆ ಎಂದು ಅಭಯವನ್ನೂ ನೀಡಿದರು.
- Advertisement -
ವರದಿ: ನಂದಕುಮಾರ ಕರಂಜೆ, ಬೀದರ