ಸಚಿವ ಶಿವಾನಂದ ಪಾಟೀಲ ಕ್ಷಮೆ ಕೇಳಬೇಕು

Must Read

ಸಿಂದಗಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಕೂಡಲೇ ರೈತರ ಬಳಿ ಕ್ಷಮೆಯಾಚಿಸಬೇಕು ಎಂದು ಕರವೇ ಉ.ಕ ಸಂಚಾಲಕ ಸತೀಶಕುಮಾರ ಕೌಲಗಿ ಆಗ್ರಹಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮಾಧ್ಯಮ ಮುಂದೆ ಮಾತನಾಡಿ, ಜವಳಿ ಸಚಿವ ಶಿವಾನಂದ ಪಾಟೀಲ ರೈತರು ಯಾವ ರೀತಿ ಸತ್ತರೂ ಅದನ್ನು ಆತ್ಮಹತ್ಯೆ ಎಂದು ಪರಿಗಣಿಸಿ ಪರಿಹಾರಕ್ಕೆ ಸಂಬಂಧಿಕರು ಆಸೆ ಪಡುತ್ತಾರೆ ಎಂಬ ಹೇಳಿಕೆ ಇಡೀ ರಾಜ್ಯದ ರೈತರನ್ನು ಅವಮಾನಿಸಿದಂತಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತು ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಕೂಡಲೇ ರೈತರ ಬಳಿ ಕ್ಷಮೆಯಾಚಿಸಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group