ಬೀದರ್ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದ ಕೆಡಿಪಿ ಸಭೆಯಲ್ಲಿ ಶಾಸಕ ಸಿದ್ದು ಪಾಟೀಲ ಹಾಗೂ ಎಂಎಲ್ ಸಿ ಭೀಮರಾವ್ ಪರಸ್ಪರ ಕೈಮಿಲಾಯಿಸಿ ಹೊಡೆದಾಟಕ್ಕೆ ಇಳಿದಿದ್ದರಿಂದ ಕೆಡಿಪಿ ಸಭೆ ರಣಾಂಗಣವಾಗಿ ಪರಿವರ್ತನೆಯಾಯಿತು.
ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಹಾಗೂ ಇಬ್ಬರು ಎಂಎಲ್ಸಿ ಭೀಮರಾವ್ ಪಾಟೀಲ್, ಚಂದ್ರಶೇಖರ್ ನಡುವೆ .ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ವಾಗ್ವಾದ ನಡೆಯಿತು.
ಸಚಿವ ಈಶ್ವರ ಖಂಡ್ರೆಯವರು ಕೂಡ ಸಭೆಯಲ್ಲಿ ಹಾಜರಿದ್ದರು. ಈ ವೇಳೆ ಕೈ ಕೈ ಮಿಲಾಯಿಸಿದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್ಸಿ ಭೀಮರಾವ್ ಪಾಟೀಲ್ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡರು
ಮೂವರನ್ನು ಸಮಾಧಾನಪಡಿಸಲು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹರಸಾಹಸ ಪಡಬೇಕಾಯಿತು. ಕೊನೆಗೆ ಸಭೆಯನ್ನು ಸಚಿವರು ಮುಂದಕ್ಕೆ ಹಾಕಿದರು.
ಸಭೆಯಲ್ಲಿ ಸಚಿವ ರಹೀಂ ಖಾನ್, ಡಿಸಿ ಶಿಲ್ಪಾ ಶರ್ಮಾ ಹಾಗೂ ಸಿಇಓ ಗಿರೀಶ್ ಸೇರಿದಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳು ಪಾಲ್ಗೊಂಡಿದ್ದರು.
ವರದಿ : ನಂದಕುಮಾರ ಕರಂಜೆ, ಬೀದರ

