ವಿದ್ಯುತ್ ಅಪಘಾತಕ್ಕೆ ಬಲಿಯಾದವನ ಕುಟುಂಬಕ್ಕೆ ಪರಿಹಾರ ನೀಡಿದ ಶಾಸಕ

Must Read

ಸಿಂದಗಿ- ಸಿಂದಗಿ ತಾಲೂಕಿನ ವಿದ್ಯುತ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತಿದ್ದ ಖೈನೂರ ಗ್ರಾಮದ ಶಾಂತಪ್ಪ ವಿಶ್ವನಾಥ ಗಡಗಿಮನಿ ಎಂಬುವವರು ಕರ್ತವ್ಯ ವೇಳೆಯಲ್ಲಿ ವಿದ್ಯುತ್ ಅಪಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರಿಗೆ ಶಾಸಕ ಅಶೋಕ ಮನಗೂಳಿ ಅವರು ಸರ್ಕಾರದಿಂದ ನೀಡಿರುವ ರೂ. ೫ ಲಕ್ಷ ಪರಿಹಾರದ ಚೆಕ್ ಅನ್ನು ಗುರುವಾರ ವಿತರಿಸಿದರು.

ಈ ಸಂಧರ್ಭದಲ್ಲಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಶಾಂತಪ್ಪ ಗಡಗಿಮನಿ ಅವರು ವಿದ್ಯುತ್ ಅಪಘಾತದಿಂದ ಸಾವನ್ನಪ್ಪಿದ್ದು ದುರಂತ. ಅವರ ಕುಟುಂಬಸ್ಥರ ಜೊತೆ ಸದಾ ಸರ್ಕಾರವಿದೆ. ಭಯ ಪಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರಕ್ಕೆ ಈ ವರದಿಯನ್ನು ನೀಡಿದ ತಕ್ಷಣವೇ ಇದನ್ನು  ಗಂಭಿರವಾಗಿ ಪರಿಗಣಿಸಿ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡಿದೆ ಎಂದರು.

ಈ ವೇಳೆ ಹೆಸ್ಕಾಂ ಅಧಿಕಾರಿ ಚಂದ್ರಕಾಂತ ನಾಯಕ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಪೂಜಾರಿ, ಶ್ರೀಕಾಂತ ಸೋಮಜ್ಯಾಳ, ಹೊನ್ನಪ್ಪಗೌಡ ಬಿರಾದಾರ, ಮೃತರ ತಂದೆ ವಿಶ್ವನಾಥ ಗಡಗಿಮನಿ, ದುಂಡಮ್ಮ ಗಡಗಿಮನಿ ಸೇರಿದಂತೆ ಇತರರು ಇದ್ದರು.

- Advertisement -
- Advertisement -

Latest News

ಪ್ರೊ. ಭೀಮರಾಯ ಬಿರಾದಾರರಿಗೆ ಪಿಎಚ್ ಡಿ

ಸಿಂದಗಿ : ಪಟ್ಟಣದ ಪ್ರೊ. ಭೀಮರಾಯ ರುದ್ರಗೌಡ ಬಿರಾದಾರ ಇವರಿಗೆ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕರ್ನಾಟಕ ಸುರತ್ಕಲ್ ಮಂಗಳೂರು ವತಿಯಿಂದ ಪಿಎಚ್.ಡಿ ಪದವಿ ನೀಡಿ...
- Advertisement -

More Articles Like This

- Advertisement -
close
error: Content is protected !!
Join WhatsApp Group