ಹಬ್ಬದ ನೆಪದಲ್ಲಿ ಗೋವಧೆ: ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ

Must Read

ಬೀದರ – ಬಕ್ರೀದ್ ಹಬ್ಬದ ನೆಪದಲ್ಲಿ ಜಿಲ್ಲೆಯಲ್ಲಿ ಅನಧಿಕೃತ ಗೋವು ಒಂಟೆಗಳ ಸಾಗಾಟ ಮತ್ತು ವಧೆ ಮಾಡುವುದನ್ನು ನಿಷೇಧಿಸಲಾಗಿದೆ ಎಂಬ ಜಿಲ್ಲಾಡಳಿತದ ಆದೇಶವಿದ್ದರೂ ಬಸವಕಲ್ಯಾಣದಲ್ಲಿ ಗೋವಧೆ ಮಾಡುತ್ತಿದ್ದವರ ಮನೆಗೆ ಹೋಗಿ ಬಿಜೆಪಿ ಶಾಸಕ ಶರಣು ಸಲಗರ ಗೋವಧೆ ಮಾಡದಂತೆ ಎಚ್ಚರಿಕೆ ನೀಡಿದರು.

ಪೊಲೀಸರೊಂದಿಗೆ ಗೋ ಕಟುಕರ ಮನೆಗಳಿಗೆ ಹೋಗಿ ಗೋವಧೆಯನ್ನು ನಿಲ್ಲಿಸಿದ ಶಾಸಕರು, ನಾನು ಇರುವವರೆಗೂ ಜಿಲ್ಲೆಯಲ್ಲಿ ಗೋವಧೆ ಮಾಡಲು ಬಿಡುವುದಿಲ್ಲ ಎಂದು ಗರ್ಜಿಸಿದರು.

ಸುಮಾರು ಹದಿನೈದಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಿದ ಶಾಸಕರು, ಕಾಂಗ್ರೆಸ್ ನಾಯಕ ವಿಜಯ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರದ ಆದೇಶದಂತೆ ಗೋವಧೆ ತಡೆಯುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡರು.

ಫೇಸ್ ಬುಕ್ ಲೈವ್ ನಲ್ಲಿಯೇ ಗೋವಧೆ ನಡೆಯುತ್ತಿದ್ದ ಮನೆಗಳಿಗೆ ಭೇಟಿಕೊಟ್ಟು ಆಕ್ರೋಶಭರಿತರಾಗಿ ಅವರಿಗೆ ಎಚ್ಚರಿಕೆ ನೀಡಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group