- Advertisement -
ಬೀದರ: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಕೊಡೇಕಲ್ ಮತ್ತು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳ್ಳಖೇಡ ಗ್ರಾಮಗಳಲ್ಲಿ ಜನರು ಸರಿಯಾದ ಬಸ್ಸು ಸಿಗದೆ ಪರದಾಡುವಂತಾಯಿತು.
ಬೀದರ್ ನಲ್ಲಿ ಕೂಡ ಕೇಂದ್ರ ಬಸ್ ನಿಲ್ದಾಣದಲ್ಲಿ ಯಾವುದೇ ಬಸ್ ಗಳಿಲ್ಲದೆ ಕೇಂದ್ರ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು.
450 ಬಸ್ ಗಳನ್ನು ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಕಳಿಸಿದ್ದ ಕಾರಣಕ್ಕೆ ಬೀದರ್ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೇ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಿರುವ ಪ್ರಯಾಣಿಕರು, ಮಕ್ಕಳು ತೊಂದರೆ ಅನುಭವಿಸುವಂತಾಯಿತು.
- Advertisement -
ವರದಿ: ನಂದಕುಮಾರ ಕರಂಜೆ,ಬೀದರ