Mudalagi: ಮಣ್ಣು ಪರೀಕ್ಷೆ ಮತ್ತು ಹಸಿರೆಲೆ ಗೋಬ್ಬರದ ಮಹತ್ವ ಕಾರ್ಯಕ್ರಮ

Must Read

ಮೂಡಲಗಿ: ರೈತರು ಬೇಸಾಯ ಮಾಡುವ ಮೊದಲು ತಮ್ಮ ಜಮೀನದಲ್ಲಿ ಮಣ್ಣು ಪರೀಕ್ಷೆ ಮಾಡಿಕೊಂಡು ಭೂಮಿಗೆ ಫೋಷಕಾಂಶ ಗೊಬ್ಬರವನ್ನು ನೀಡಲು  ಸಣಬು, ಗೊಬ್ಬರ ಗಿಡ ಬೆಳೆಗಳನ್ನು ಸಮಯ ಅನುಸಾರ ಭೂಮಿಯಲ್ಲಿ ಬಳಕೆ ಮಾಡುವದರಿಂದ ಉತ್ತಮ ಬೆಳೆ ಬೆಳೆಯಲು ಸಾಧ್ಯ ಎಂದು ತುಕ್ಕಾನಟ್ಟಿ ಬರ್ಡ್ಸ್ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಎಮ್.ಎನ್.ಮಲಾವಡಿ ಹೇಳಿದರು.

ಅವರು ತಾಲೂಕಿನ ನಾಗನೂರ ಗ್ರಾಮದ ಅಮೋಘಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೈತ ಕ್ಷೇತ್ರ ಪಾಠ ಶಾಲೆಯ ಕಾರ್ಯಕ್ರಮದ ಅಡಿಯಲ್ಲಿ ಮಣ್ಣು ಪರೀಕ್ಷೆ ಮತ್ತು ಹಸಿರೆಲೆ ಗೊಬ್ಬರದ ಮಹತ್ವ ಕಾರ್ಯಕ್ರಮದಲ್ಲಿ ರೈತ-ರೈತ ಮಹಿಳೆಯನ್ನು ಉದ್ಧೇಶಿಸಿ ಮಾತನಾಡಿದರು

ಯೋಜನೆಯ ಕೃಷಿ ಮೇಲ್ವಿಚಾರಕ ಮೈಲಾರಪ್ಪ ಪೈಲಿ ಮಾತನಾಡಿ,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಅನೂಕ್ಕೂಲವಾಗುವ ದೃಷ್ಟಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥಾಪಕರಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಕೃಷಿ ಅಧ್ಯಯನ ಪ್ರವಾಸ, ಬೇಸಾಯಕ್ಕೆ ಯಂತ್ರೋಪಕ ಖರೀದಿ, ಸಸಿ ನಾಟಿ, ಮಾದರಿಯ ಹೈನುಗಾರಿಕೆಯ ಕೋಟಿಗೆ ರಚನೆ ಸೇರಿದಂತೆ ಹಲವಾರು ಯೋಜನೆ ರೂಪಿಸಿರುವದನ್ನು ಯೋಜನೆಯ ಸದಸ್ಯರು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು. 

ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ಗಣಪತಿ ಬಟ್ಟಿ, ಸೇವಾಪ್ರತಿನಿಧಿ ಮದಿನಾ ನಾಯಕವಾಡಿ,ಒಕ್ಕೂಟದ ಅಧ್ಯಕ್ಷೆ ರೇಣುಕಾ ಪೂಜಾರಿ ಮತ್ತು ಅಣ್ಣಪ್ಪ ಬೆನಕನಹಳ್ಳಿ ಸ್ವ-ಸಹಾಯ ಸಂಘದ ಸದಸ್ಯರು ರೈತರು ಇದ್ದರು.

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...

More Articles Like This

error: Content is protected !!
Join WhatsApp Group