spot_img
spot_img

Mudalagi: ಯುಥ್ ಫಾರ್ ಪರಿವರ್ತನ ತಂಡದಿಂದ ನೋಟ್ ಬುಕ್ ವಿತರಣೆ

Must Read

- Advertisement -

ಮೂಡಲಗಿ: ಕಸ ದಿಂದ ರಸ ಎನ್ನುವಂತೆ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡವು ಬೇಸಿಗೆ ಸಮಯದಲ್ಲಿ ತಮ್ಮ ಅತ್ಯಮೂಲ್ಯ ಸಮಯವನ್ನು ನಿಗದಿಗೊಳಿಸಿ ಮರು ಬಳಕೆಯ ನೋಟ್ ಬುಕ್‍ಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಳಕೆಯ ವಿನೂತನ ಯೋಜನೆ ಶ್ಲಾಘನೀಯವಾಗಿದೆ ಎಂದು ಪ್ರಧಾನ ಗುರು ರಾಜು ಕೊಳದೂರ ಹೇಳಿದರು.

ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡದಿಂದ ಉಚಿತವಾಗಿ ನೀಡಲ್ಪಟ್ಟ ನೋಟ್ ಬುಕ್ ವಿತರಿಸಿ ಮಾತನಾಡಿದರು. 

ಮರು ಬಳಕೆ ಎನ್ನುವ ಉದ್ದೇಶವನ್ನಿಟ್ಟುಕೊಂಡು ನಗರದ ಹಾಗೂ ವಿವಿಧೆಡೆ ಉಪಯುಕ್ತ ಹಾಳೆಗಳನ್ನು ಒಂದುಗೂಡಿಸಿ ಬುಕ್ ಬೈಂಡ್ ಮಾಡಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವದು ಮೆಚ್ಚುವಂತಹದು. ಅವರು ಕೈಗೊಂಡಿರುವ ಮರು ಬಳಕೆಯ ಸಾಮರ್ಥ್ಯಗಳನ್ನು ಎಲ್ಲರೂ ಅಳವಡಿಸಿಕೊಂಡರೆ ಹಣದ ಉಳಿತಾಯದ ಜೊತೆಗೆ ನಾವಿಣ್ಯತೆಯ ಕಲೆಗಳನ್ನು ಕಲಿಯಬಹುದೆಂದು ಅಭಿಪ್ರಾಯಪಟ್ಟರು. 

- Advertisement -

ಕಾರ್ಯಕ್ರಮದಲ್ಲಿ ಎಸ್.ಡಿಎಮ್.ಸಿ ಅಧ್ಯಕ್ಷ ಯಲ್ಲಪ್ಪ ಪೂಜೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಕೆ.ಎಲ್. ಮೀಶಿ, ಪ್ರಧಾನ ಗುರು ಎಮ್.ಎನ್ ಪೆಂಡಾರಿ, ಎ.ಎ ಪಟವೇಗಾರ, ಎಸ್.ಐ ನದಾಫ್, ರವಿರಾಜ ಕಾಂಬಳೆ, ಮಹಾಂತೇಶ ಭಜಂತ್ರಿ, ಲಕ್ಷ್ಮೀ ಕೆಳಗೇರಿ, ಜಯಶ್ರೀ ಸರ್ವಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

- Advertisement -
- Advertisement -

Latest News

ದಸರಾ ಕ್ರೀಡಾಕೂಟ: ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೈಲಹೊಂಗಲ: 2024-25 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಲಕ್ಷ್ಮಿ...
- Advertisement -

More Articles Like This

- Advertisement -
close
error: Content is protected !!
Join WhatsApp Group