ಮೂಡಲಗಿ ತಾಲೂಕಾ ೨ ನೇ ಸಾಹಿತ್ಯ ಸಮ್ಮೇಳನ; ಆಮಂತ್ರಣ ಪತ್ರಿಕೆ ಬಿಡುಗಡೆ

Must Read

ಮೂಡಲಗಿ – ಸಡಗರ ಸಂಭ್ರಮಗಳಿಂದ ಎಲ್ಲರೂ ಸೇರಿ ಮೂಡಲಗಿ ತಾಲೂಕಾ ಸಾಹಿತ್ಯ ಸಮ್ಮೇಳನವನ್ನು ಆಚರಿಸೋಣ ಸಮ್ಮೇಳನದ ಯಶಸ್ಸಿಗಾಗಿ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಸಿಂಧಿಹಟ್ಟಿ ಹೇಳಿದರು.

ದಿ.೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲೂಕಾ ೨ ನೇ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ರೇ. ಭಾಸ್ಕರ ಸಣ್ಣಕ್ಕಿಯವರನ್ನಾಗಿ ಅಯ್ಕೆ ಮಾಡಲಾಗಿದ್ದು ಅವರಿಗೆ ಇಂದೇ ಆಹ್ವಾನ ನೀಡಲಾಗುವುದು. ಶಿವಾಪೂರದ ಶ್ರೀ ಅಡವಿ ಸಿದ್ದೇಶ್ವರ ಮಠದಲ್ಲಿ ಸಮ್ಮೇಳನ ಅದ್ದೂರಿಯಾಗಿ ನಡೆಯಲಿದೆ.

ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು, ಜಾನಪದ ಕಾರ್ಯಕ್ರಮಗಳು, ಕಲಾಪ್ರದರ್ಶನಗಳು ನಡೆಯಲಿವೆ. ವಿವಿಧ ಕಲಾವಿದರು ಸಾಹಿತಿಗಳಿಗೆ ಸತ್ಕಾರ ನೆರವೇರಲಿದೆ ಎಂದು ಸಂಕ್ಷಿಪ್ತವಾಗಿ ಸಮ್ಮೇಳನದ ವಿವರಗಳನ್ನು ನೀಡಿದರು.

ತಾಲೂಕಾ ಕಸಾಪ ದ ನಿಕಟ ಪೂರ್ವ ತಾಲೂಕಾ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಮಾತನಾಡಿದರು.

ವೇದಿಕೆಯ ಮೇಲೆ ಶ್ರೀಮತಿ ಶಾಂತಾ ಜಿಣಗಿ, ವೆಂಕಟೇಶ ಹಂಚಿನಾಳ, ಡಾ. ಮಹಾದೇವ ಪೋತದಾರ,ಎ ಎಚ್ ವಂಟಗೋಡಿ ಉಪಸ್ಥಿತರಿದ್ದರು.

ಬಿ ಆರ್ ತರಕಾರ ಸ್ವಾಗತಿಸಿ ನಿರೂಪಿಸಿದರು

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group