ಮುನವಳ್ಳಿ: ಪಟ್ಟಣದ ಸುಪ್ರಸಿದ್ದ ಐತಿಹಾಸಿಕ ದೇವಾಲಯ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿದ್ದು ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುನವಳ್ಳಿ ಸೋಮಶೇಖರಮಠದ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ.
ಊರಿನ ಗಣ್ಯರು,ಹಿರಿಯರು,ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮಿತಿಯವರು ಸಕಲ ಸದ್ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮಂಗಳಾರುತಿ ಪಲ್ಲಕ್ಕಿ ಸೇವೆ ಜರುಗುವ ಮೂಲಕ ಕಾರ್ತಿಕೋತ್ಸವ ಜರುಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.