spot_img
spot_img

ಮೈಸೂರು-ಧಾರವಾಡ ರೈಲು ಇನ್ನು ಬೆಳಗಾವಿಯವರೆಗೆ – ಈರಣ್ಣ ಕಡಾಡಿ ಮಾಹಿತಿ

Must Read

- Advertisement -

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಗುರುವಾರ ಸೆ-07 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ  ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ.  ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದರು.

ನನ್ನ ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್ ರೈಲು  ಪ್ರಾರಂಭಿಸಲು ಅನುಮತಿ ನೀಡಿದ  ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುವುದಾಗಿ ಕಡಾಡಿ ಹೇಳಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group