- Advertisement -
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕರಾದ ನಾಗಮಲ್ಲೇಶ್ ಮತಯಾಚನೆ ಮಾಡಿದರು
ಮೈಸೂರಿನ ಶಾರದಾ ವಿಲಾಸ ಪದವಿಪೂರ್ವ ಕಾಲೇಜಿನಲ್ಲಿಂದು (ಮೇ 23) ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನಾಗಮಲ್ಲೇಶ್ ಅವರು ಮತಯಾಚಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಮಂಜುನಾಥ್ ಎನ್.ಜೆ., ಮಲ್ಲಿಕಾರ್ಜುನ ಎಂ., ಜೈಪಾಲ ಜಿ., ಕಾಲೇಜಿನ ಪ್ರಾಂಶುಪಾಲರಾದ ಸಿ.ಕೆ.ಅಶೋಕಕುಮಾರ್, ಡಾ.ಡಿ.ಸಿ.ಉಮೇಶ್, ಸಯ್ಯದ್ ಮುಷೀರ್ ಅಹಮ್ಮದ್ ಉಪಸ್ಥಿತರಿದ್ದರು.