ಫೆ. 21ರಿಂದ ನಂದಿನಿ ಹಾಲಿನ ದರ ಪರಿಷ್ಕರಣೆ :ಪರಿಷ್ಕೃತ ದರವೆಲ್ಲ ರೈತರಿಗೆ ಸಂದಾಯ

Must Read

ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಎಮ್ಮೆ ಹಾಲಿಗೆ ₹ 3.40, ಆಕಳ ಹಾಲಿಗೆ ₹ 1 ಹೆಚ್ಚಳ.

ಗೋಕಾಕ- ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಎಲ್ಲ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದುಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಎಮ್ಮೆ ಹಾಲಿನ ದರ ಪ್ರತಿ ಲೀ. ₹ 41.60 ದರ ಇದೆ. ಈಗ ₹ 3.40 ಹೆಚ್ಚಳ ಮಾಡಲಾಗುವುದು. ಪ್ರೋತ್ಸಾಹಧನ ₹ 5 ಸೇರಿ ಒಟ್ಟು ₹ 50 ದರ ನಿಗದಿ ಮಾಡಲಾಗಿದೆ . ಅದರಂತೆ ಆಕಳ ಹಾಲಿಗೆ ಪ್ರತಿ ಲೀ ₹ 29.10 ದರ ಇದೆ. ₹ 1 ಹೆಚ್ಚಳ ಮಾಡಲಾಗಿದೆ. ಪ್ರೋತ್ಸಾಹಧನ ₹ 5 ಸೇರಿ ಒಟ್ಟು ₹ 35 ದರ ನಿಗದಿ ಮಾಡಲಾಗಿದೆ. ಹೀಗೆ ನಂದಿನಿ ಹಾಲಿನ ದರ ಪರಿಷ್ಕರಣೆಯಾಗಲಿದೆ. ಒಕ್ಕೂಟಕ್ಕೆ ಹಾಲು ಪೂರೈಸುವ ರೈತರಿಗೆ 10 ದಿನದಲ್ಲೇ ಬಿಲ್‌ ಪಾವತಿ ಮಾಡಲಾಗುತ್ತಿದೆ. ಇದರಿಂದಾಗಿ ರೈತರಿಗೂ, ಗ್ರಾಹಕರಿಗೂ ಅನುಕೂಲವಾಗಿದೆ ಎಂದು ಹೇಳಿದರು.

ಜಿಲ್ಲಾ ಹಾಲು ಒಕ್ಕೂಟಕ್ಕೆ ಕಳೆದ ವರ್ಷ ₹ 68 ಲಕ್ಷ ನಿವ್ವಳ ಲಾಭವಾಗಿತ್ತು. ಈಗ ವಾರ್ಷಿಕ ವಹಿವಾಟು ₹ 400 ಕೋಟಿ ಗುರಿಯನ್ನು ಹೊಂದಲಾಗಿದೆ.
ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯವರೆಗೆ ₹ 5 ಕೋಟಿ ಲಾಭ ತರುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಪ್ರತಿ ಮಾಸಿಕ ₹ 42 ಕೋಟಿ ವಹಿವಾಟು ನಡೆಯುತ್ತಿದೆ. ಒಕ್ಕೂಟಕ್ಕೆ ಆಗಿರುವ ಲಾಭವನ್ನು ಮರಳಿ ರೈತರಿಗೆ, ಒಕ್ಕೂಟದ ಸಿಬ್ಬಂದಿಗೆ ನೀಡಲಾಗುವುದು. ಸೊಸೈಟಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು. ಸಂಘಗಳ ನಿರ್ವಹಣೆಗೂ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿಯಲ್ಲಿ ಶೀಘ್ರವೇ ಮೆಗಾ ಡೇರಿ

ಬೆಳಗಾವಿಯಲ್ಲಿ ಶೀಘ್ರವೇ ಮೆಗಾ ಡೇರಿಯನ್ನು ಸ್ಥಾಪನೆ ಮಾಡಲಾಗುವುದು. ಮೆಗಾ ಡೇರಿ ಸ್ಥಾಪನೆಗೆ ನಿತ್ಯ 3.5 ಲಕ್ಷದಿಂದ 4 ಲಕ್ಷ ಲೀಟರ್‌ ಹಾಲು ಸಂಗ್ರಹಿಸಬೇಕಾಗುತ್ತದೆ. ಇದರಿಂದಾಗಿ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂವಾಗಲಿದೆ. ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವನ್ನು ಉತ್ತರ ಕರ್ನಾಟಕದಲ್ಲಿಯೇ ನಂ. 1 ಮಾಡಲಾಗುವುದು. ಹಾಲು ಪೂರೈಸಿದರೆ ಉತ್ತಮ ದರ ನೀಡಲಾಗುವುದು. ಆಡಳಿತ ಮಂಡಳಿ ಪರಿವರ್ತನೆ, ಬದಲಾವಣೆ ಆಗಿದೆ. ಹೀಗೆಯೇ ಮುಂದುವರೆಸಿದರೆ ದರ ಹೆಚ್ಚು ಸಿಗುತ್ತದೆ. ದರ ಹೆಚ್ಚಳ ಮಾಡಿರುವ ಕುರಿತು ರೈತರಿಗೆ ತಿಳಿಸಿಹೇಳಬೇಕು ಎಂದು ಬಾಲಚಂದ್ರ ಜಾರಕಿಹೊಳಿ ಸೊಸೈಟಿಗಳಿಗೆ ಮನವಿ ಮಾಡಿದರು.

ಒಕ್ಕೂಟದ ನಿರ್ದೇಶಕರಾದ ಬಾಬು ಕಟ್ಟಿ, ಮಲ್ಲಪ್ಪ ಪಾಟೀಲ, ಕಲ್ಲಪ್ಪ ಗಿರೆನ್ನವರ, ಬಸವರಾಜ ಪರವಣ್ಣವರ, ಬಾಬುರಾವ ವಾಘಮೊಡೆ, ವಿರುಪಾಕ್ಷ ಈಟಿ, ರಾಯಪ್ಪ ಡೂಗ, ಪ್ರಕಾಶ ಅಂಬೋಜಿ, ಮಹಾದೇವ ಬಿಳಿಕುರಿ, ಸಂಜಯ ಶಿಂತ್ರೆ, ರಮೇಶ ಅಣ್ಣಿಗೇರಿ, ಸದೆಪ್ಪ ವಾರಿ, ಶಂಕರ ಇಟ್ನಾಳ, ಸವಿತಾ ಖಾನಪ್ಪಗೋಳ, ಸದಾಶಿವ ದೇಶಿಂಗೆ, ರವೀಂದ್ರ ಪಾಟೀಲ, ರಾಜೀವ ಕುಲೇರ, ಜೆ.ಜೈಕುಮಾರ, ಕೃಷ್ಣ ಕ್ಯೂರ, ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಎನ್‌ ಶ್ರೀಕಾಂತ್, ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group