ಬೈಲಹೊಂಗಲ: ಪಟ್ಟಣದ ತಾಲೂಕು ಪಂಚಾಯತಿ ಸಭಾಭವನದಲ್ಲಿ ಶುಕ್ರವಾರ ದಿನಾಂಕ 26.09.2025 ರಂದು ಬೆಳಿಗ್ಗೆ 10.30 ಗಂಟೆಗೆ ನಮ್ಮನ್ನಗಲಿದ ನಾಡಿನ ಖ್ಯಾತ ಸಾಹಿತಿಗಳಾದ ಪದ್ಮಶ್ರೀ, ಪದ್ಮವಿಭೂಷಣ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ.
ಸಾಹಿತಿಗಳು, ಕಲಾವಿದರು, ಕನ್ನಡ ಸಾಹಿತ್ಯ ಪರಿಷತ್ತಿನ, ಕನ್ನಡಪರ ಸಂಘಟನೆಗಳ ಸರ್ವ ಸದಸ್ಯರು, ಕನ್ನಡಾಭಿಮಾನಿಗಳು ಸಮಯಕ್ಕೆ ಸರಿಯಾಗಿ ಹಾಜರಿರಲು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ, ಗೌರವ ಕಾರ್ಯದರ್ಶಿಗಳಾದ ಡಾ. ಪ್ರಕಾಶ ಮೆಳವಂಕಿ, ಶ್ರೀಮತಿ ಮಂಜುಳಾ ಶೆಟ್ಟರ, ಗೌರವ ಕೋಶಾಧ್ಯಕ್ಷರಾದ ಮಹೇಶ ಕೋಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

