‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಸಭೆಯಲ್ಲಿ ಮೊಬೈಲ್ ನಲ್ಲಿ ಮುಳುಗಿದ ಅಧಿಕಾರಿಗಳು

Must Read

ಬೀದರ – ಬೀದರ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಚಾಂಗಲೇರಾ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅಹವಾಲು ಸ್ವೀಕಾರ ಮಾಡಲು ಎಲ್ಲ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ನಡೆಸಲಾಯಿತು.

ಜಿಲ್ಲಾಧಿಕಾರಿ ಮತ್ತು ಶಾಸಕರು ಜನ ಸಾಮಾನ್ಯರ ಸಮಸ್ಯೆ ಕೇಳುತ್ತಾ ಇದ್ದರೆ ,ಇನ್ನೊಂದೆಡೆ ಕೆಲ ಅಧಿಕಾರಿಗಳು ಈ ಸಭೆ ನಮಗೆ ಸಂಬಂಧವೆ ಇಲ್ಲ ಎನ್ನುವಂತೆ ಪ್ರಾರಂಭದಿಂದ ಮುಕ್ತಾಯದವರೆಗೆ ಮೊಬೈಲ್ ಫೋನಿನಲ್ಲಿ ಕೈ ಆಡಿಸುತ್ತಾ ಕುಳಿತಿರುವುದು ಕಂಡು ಬಂದಿದೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿಯೇ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲನೆ ಮರೆತಿರುವುದನ್ನ ನೋಡಿದರೆ,ಇನ್ನೂ ತಮ್ಮ ಕಚೇರಿಯಲ್ಲಿ ಯಾವ ರೀತಿ ಕರ್ತವ್ಯ ನಿರ್ವಹಿಸುತ್ತಾರೋ ಎಂಬುದು ಪ್ರಶ್ನೆಯಾಗಿ ಉಳಿಯುತ್ತದೆ.

ಈ ರೀತಿ ಫೋನಿನಲ್ಲಿ ಚಾಟ್ ಮಾಡುತ್ತಾ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಜಿಲ್ಲಾ ಅಧಿಕಾರಿ ಕ್ರಮ ಜರುಗಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group