Homeಸುದ್ದಿಗಳುಹಳೆಯ ದ್ವೇಷ; ವ್ಯಕ್ತಿಯ ಕೊಲೆ

ಹಳೆಯ ದ್ವೇಷ; ವ್ಯಕ್ತಿಯ ಕೊಲೆ

ಬೀದರ – ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಗ್ರಾಮದ ಬಳಿ ನಡೆದಿದೆ.

40 ವರ್ಷದ ಅಂತೇಷ್ ಎಂಬ ಗೆಳೆಯನನ್ನು ಕಟ್ಟಿಗೆಯಿಂದ ಹೊಡೆದು ಗೆಳೆಯನೇ ಕೊಲೆ ಮಾಡಿದ್ದಾನೆ… ಪ್ರವೀಣ್ ಕುಮಾರ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದು ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಆರೋಪಿಯ ಮನೆಯ ಮುಂದೆ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ… ಮೂಲತಃ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ಅಂತೇಷ್ ಕೊಲೆಯಾಗಿದ್ದು ಅದೇ ಗ್ರಾಮದ ಪ್ರವೀಣ್ ಕುಮಾರ್ ಊಟಕ್ಕೆಂದು ಡಾಬಾಗೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ… ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ಇತ್ತ ಆರೋಪಿ ವಿರುದ್ದ ಕೊಲೆಯಾದ ವ್ಯಕ್ತಿಯ ಸಹೋದರನ ಆಕ್ರೋಶ ವ್ಯಕ್ತವಾಗಿದೆ.ಆರೋಪಿಯ ಮನೆಯ ಮುಂದೆ ಶವವಿಟ್ಟು ಪ್ರತಿಭಟನೆ ಮಾಡುವ ವೇಳೆ ಸಹೋದರನ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ಕೊಡಬೇಕು ಎಂದು ಹಿರಿಯ ಸಹೋದರ ಆಕ್ರೋಶ. ಕೊಲೆಯಾದ ಅಂತೇಷ್ ಸಹೋದರ ಸಂತೋಷ ನ್ಯಾಯಕ್ಕಾಗಿ ಕೈಮುಗಿದು ಬೇಡಿಕೊಳ್ಳುತ್ತಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

error: Content is protected !!
Join WhatsApp Group