spot_img
spot_img

ಫೆ.2 ರಂದು ದಿ. ಶಿವಾನಂದ ಪಾಟೀಲರಿಗೆ ನುಡಿ ನಮನ

Must Read

spot_img

ಸಿಂದಗಿ: ಜ್ಯಾತ್ಯತೀತ ಜನತಾದಳಕ್ಕೆ ಜಿಲ್ಲೆಯಲ್ಲಿಯೇ ಸಿಂದಗಿ ಮತಕ್ಷೇತ್ರ ಮೊಟ್ಟ ಮೊದಲ ಬುನಾದಿಯಾಗಿತ್ತು.

ದಿ.ಎಂ.ಸಿ.ಮನಗೂಳಿ ಅವರ ಅಗಲಿಕೆಯಿಂದ ಪಕ್ಷದ ಸಂಘಟನೆ ನೆಲಕಚ್ಚಿತ್ತು ಅದನ್ನು ಪಕ್ಷ ಪುನಃ ಸದೃಢವಾಗಿ ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿದ ಕೆಲವೇ ದಿನಗಳಲ್ಲಿ ದಿ.ಶಿವಾನಂದ ಪಾಟಿಲ ಅವರು ಅಗಲಿದ್ದು ಫೆ. 02 ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಾರ್ಯಕರ್ತರು ಹಾಗೂ ದಿ.ಶಿವಾನಂದ ಪಾಟೀಲರ ಅಭಿಮಾನಿಗಳು ಸೇರಿ ಶಹಾಪುರ ಪೇಟ್ರೋಲ್ ಪಂಪ್ ಪಕ್ಕದಲ್ಲಿ ಶುಭನುಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಹೇಳಿದರು.

ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮಕ್ಕೆ ಕ್ಷೇತ್ರದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಅವರ ಆತ್ಮಕ್ಕೆ ಶಾಂತಿ ಕೊರಬೇಕು ಎಂದು ಮನವಿ ಮಾಡಿಕೊಂಡರು.

ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜಾಧ್ಯಕ್ಷ ಸಿ.ಎಮ್.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಶಾಸಕ ದೇವಾನಂದ ಚವ್ಹಾಣ, ಘೋಷಿತ ಅಭ್ಯರ್ಥಿಗಳು ಸೇರಿದಂತೆ ಹಲವಾರು ಮುಖಂಡರು ನುಡಿ- ನಮನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಸುನೀತಾ ಚವ್ಹಾಣ, ತಾಲೂಕಾ ಅಧ್ಯಕ್ಷ ದಾನಪ್ಪಗೌಡ ಚನ್ನಗೊಂಡ, ಆರ್.ಕೆ.ಪಾಟೀಲ, ಮಲ್ಲನಗೌಡ ಪಾಟೀಲ ಮಾತನಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಘಟಕಾಧ್ಯಕ್ಷೆ ಜ್ಯೋತಿ ಗುಡಿಮನಿ, ದಿ.ಪಾಟೀಲರ ಪತ್ನಿ ವಿಶಾಲಕ್ಷಿ ಪಾಟೀಲ, ಪುತ್ರ ರಕ್ಷಿತ, ಮಗಳು ಐಶ್ವರ್ಯ, ಎಂ.ಎನ್,ಪಾಟೀಲ, ಪ್ರಕಾಶ ಹಿರೇಕುರಬರ, ಮೋಮ್ಮದಸಾಬ ಉಸ್ತಾದ, ಪುರಸಭೆ ಸದಸ್ಯ ರಾಜಣ್ಣಿ ನಾರಾಯಣಕರ, ಮಹಾಂತೇಶ ಪರಗೊಂಡ, ಭೀಮನಗೌಡ ಬಿರಾದಾರ, ಮೇಘನಾ, ಸನಾ ಪ್ರಶಾಂತ ಸಾಲೋಟಗಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

- Advertisement -
- Advertisement -

Latest News

ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ...
- Advertisement -

More Articles Like This

- Advertisement -
close
error: Content is protected !!