spot_img
spot_img

ಜ.28ರಂದು ಈಶ್ವರೀಯ ವಿಶ್ವ ವಿದ್ಯಾಲಯದಿಂದ ‘ಸಮಯದ ಕರೆ-ಸಕಾರಾತ್ಮಕ ಬದಲಾವಣೆ’

Must Read

spot_img
- Advertisement -

ಮೈಸೂರು: ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಜ.28ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಹುಣಸೂರು ರಸ್ತೆಯಲ್ಲಿರುವ ಲಿಂಗದೇವರುಕೊಪ್ಪಲಿನ ‘ಜ್ಞಾನ ಸರೋವರ ರಿಟ್ರೀಟ್ ಸೆಂಟರ್’ನಲ್ಲಿ ಆಡಳಿತಾಧಿಕಾರಿಗಳಿಗೆ ‘ಸಮಯದ ಕರೆ-ಸಕಾರಾತ್ಮಕ ಬದಲಾವಣೆ’ ಎಂಬ ವಿಷಯದ ಕುರಿತು ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ.

ಉದ್ಘಾಟನೆ ಮತ್ತು ಪ್ರಾಸ್ತಾವಿಕ ಭಾಷಣವನ್ನು ದೆಹಲಿಯ ಆಡಳಿತಾಧಿಕಾರಿಗಳ ವಿಭಾಗದ ಅಧ್ಯಕ್ಷೆ ರಾಜಯೋಗಿನಿ ಬಿಕೆ ಆಶಾಜಿಯವರು ಮಾಡಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ಮೈಸೂರು ನೈರುತ್ಯ ರೈಲ್ವೆ ವಿಭಾಗೀಯ ರೈಲ್ವೆ ಪ್ರಬಂಧಕರಾದ ಶ್ರೀಮತಿ ಶಿಲ್ಪ ಅಗರವಾಲ್, ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಎಮ್.ಎಸ್.ಗೀತಾ, ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಗಳಾದ ಶ್ರೀಮತಿ ಗೀತಾ ಹುಡೇದ ಆಗಮಿಸಲಿದ್ದು, ಈಶ್ವರೀಯ ವಿವಿ ಮೈಸೂರು ಉಪ ವಿಭಾಗದ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿಕೆ ಲಕ್ಷ್ಮೀಜಿ ಆಶೀರ್ವಚನ ನೀಡಲಿದ್ದಾರೆ. ರಾಜಯೋಗ ಧ್ಯಾನವನ್ನು ಈವಿವಿ ಭೂಪಾಲ್ ವಲಯದ ರಾಜಯೋಗಿನಿ ಬಿಕೆ ಅವಧೇಶ್‍ಜಿ ಮಾಡಿಸಲಿದ್ದಾರೆ. ಕಾರ್ಯಕ್ರಮ ಮತ್ತು ವಿಭಾಗದ ಬಗ್ಗೆ ಈವಿವಿ ಅಬು ಪರ್ವತದ ಆಡಳಿತಾಧಿಕಾರಿಗಳ ವಲಯದ ಮುಖ್ಯಾಲಯ ಸಂಚಾಲಕರಾದ ರಾಜಯೋಗಿ ಬಿಕೆ ಹರೀಶ್‍ಜಿ ತಿಳಿಸಿಕೊಡಲಿದ್ದಾರೆ ಎಂದು ಬಿಕೆ ಜಯಂತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಹೆಚ್ಚಿನ ಮಾಹಿತಿಗೆ ಮೊಬೈಲ್ 9448368019 ಅಥವಾ 7975785643 ಸಂಪರ್ಕಿಸಬಹುದು.

- Advertisement -
- Advertisement -

Latest News

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಾಜಿ ಸೈನಿಕರ ಸಂಘದ ಬೆಂಬಲ

ಮೂಡಲಗಿ - ಮೂಲಭೂತ ಬೇಡಿಕೆಗಳ ಈಡೇರಿಕೆಗಾಗಿ ಇದೇ ದಿ. ೧೦ ರಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ಮಾಜಿ ಸೈನಿಕರ...
- Advertisement -

More Articles Like This

- Advertisement -
close
error: Content is protected !!
Join WhatsApp Group