spot_img
spot_img

ಈ ತಲಾಟಿಯ ಬಳಿ ಸಿಕ್ಕಿದ್ದು ಬರೊಬ್ಬರಿ ಒಂದು ಕೋಟಿ !

Must Read

- Advertisement -

ರಾಮದುರ್ಗ – ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ  ೧.೧೦ ಕೋಟಿ ರೂಪಾಯಿ ನಗದನ್ನು ರಾಮದುರ್ಗ ಪೊಲೀಸರು ವಶಪಡಿಸಿಕೊಂಡಿದ್ದು ಈ ಸಂಬಂಧ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಬಲೆಗೆ ಕೆಡವಿದ್ದಾರೆ.

ಪ್ರಕರಣದ ಆರೋಪಿಯು ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ತಲಾಟಿ ವಿಠ್ಠಲ ಢವಳೇಶ್ವರ ರಾಮದುರ್ಗ ಮಾರ್ಗವಾಗಿ ಬಾಗಲಕೋಟೆಗೆ ಈ ಹಣವನ್ನು ಕಾರಿನಲ್ಲಿ ಸಾಗಿಸುತ್ತಿರುವಾಗ ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಬಳಿ ಪೊಲೀಸರು ದಾಳಿ ನಡೆಸಿ ೧ ಕೋಟಿ ೧೦ ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿಯಲ್ಲಿ ರಾಮದುರ್ಗ ಡಿವೈಎಸ್ ಪಿ ಎಂ. ಪಾಂಡುರಂಗ ಹಾಗೂ ತಂಡವು ಭಾಗವಹಿಸಿದ್ದು ಹಲಗತ್ತಿ ಚೆಕ್ ಪೋಸ್ಟ್ ಬಳಿ ಕಾರು ತಡೆದು ತಪಾಸಣೆ ನಡೆಸಿದಾಗ ಈ ದಾಖಲೆಯಿಲ್ಲದ ಹಣ ದೊರೆತಿದೆ. ಸದರಿ ಹಣ ಯಾರಿಗೆ ಸಂಬಂಧಿಸಿದ್ದು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ

- Advertisement -
- Advertisement -

Latest News

ಸಾವಿಲ್ಲದ ಶರಣರು -ಮಹಾ ದಾಸೋಹಿ ಎಲೆ ಮಲ್ಲಪ್ಪ ಶೆಟ್ಟರು

ಎಲೆ ಮಲ್ಲಪ್ಪ ಶೆಟ್ಟರ ಅವರ ಹಿರಿಯರು ಚಿಕ್ಕಮಗಳೂರಿನ ಹತ್ತಿರ ನಂದಿಹಳ್ಳಿ ಗ್ರಾಮದವರು. ರಾಜ ಮಹಾರಾಜರಿಗೆ ಸಮಾರಂಭ ಗಳಲ್ಲಿ ವೀಳ್ಯವನ್ನು ಸರಬರಾಜು ಮಾಡುವ ಕಾಯಕದವರು. ಶರಣ ಸಂಸ್ಕೃತಿಯ...
- Advertisement -

More Articles Like This

- Advertisement -
close
error: Content is protected !!
Join WhatsApp Group