- Advertisement -
ಮೂಡಲಗಿ: ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮದ ಅಂಗವಾಗಿ ಪಂಚಮಸಾಲಿ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅರಭಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೆಟ್ಟಿ ನೀಡಲಿದ್ದಾರೆ ಕಾರಣ ಈ ಕುರಿತು ಕಲ್ಲೋಳ್ಳಿಯ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಸೆ. 23 ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಎಲ್ಲ ಗ್ರಾಮಗಳ ಪಂಚಮಸಾಲಿ ಬಂಧುಗಳು ಈ ಸಭೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಎಲ್ಲರನ್ನು ಕರೆತರಬೇಕು ಎಂದು ಪಂಚಮಸಾಲಿ ಸಮಾಜ ಯುವ ಘಟಕದ ಅಧ್ಯಕ್ಷ ಸಂಗಮೇಶ ಕೌಜಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಗೆ 9449725111 ಸಂಪರ್ಕಿಸಲು ಕೋರಿದ್ದಾರೆ.