೧೫ ನೇ ಹಣಕಾಸಿನಲ್ಲಿ ಅಕ್ರಮ ಆರೋಪ, ಪಿಡಿಓ ಅಮಾನತು

Must Read

ಬೀದರ್ – ೧೫ ನೇ ಹಣಕಾಸು ಆಯೋಗದ ಅನುದಾನದಲ್ಲಿ ಅವ್ಯವಹಾರ ಮಾಡಿದ ಆರೋಪದ ಮೇರೆಗೆ ಜಿಲ್ಲೆಯ ಹುಲಸೂರ ಗ್ರಾಮ ಪಂಚಾಯತ್ ಪಿಡಿಓ ರಮೇಶ್ ಮಿಲಿಂದಕರ ಅಮಾನತುಗೊಂಡಿದ್ದಾರೆ.

ಅಮಾನತು ಮಾಡಿ ಬೀದರ ಜಿಲ್ಲಾ ಪಂಚಾಯತ ಸಿಇಓ ಗಿರೀಶ್ ಬದೋಲೆ ಆದೇಶ ಹೊರಡಿಸಿದ್ದಾರೆ.

ಗ್ರಾಮ ಸಭೆ, ಸಾಮಾನ್ಯ ಸಭೆ ನಡೆಸದೆ ಕ್ರಿಯಾಯೋಜನೆ ಸಿದ್ಧಪಡಿಸಿ ಹಣ ಲೂಟಿ ಆರೋಪ, ಸದಸ್ಯರ ಗಮನಕ್ಕೆ ತರದೆ ನಿಯಮ ಮೀರಿ ಬಿಲ್ ಪಾವತಿ ಮಾಡಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಸಿಇಓಗೆ ಸದಸ್ಯರಿಂದ ದೂರು ಹೋಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಂದ ತನಿಖೆ ಕೈಗೊಂಡು, ತನಿಖೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಿಡಿಓ ಅಮಾನತು ಆದೇಶ ಹೊರಡಿಸಲಾಗಿದೆ.

ಸರ್ಕಾರದ ನಿಯಮ ಮೀರಿ 15ನೇ ಹಣಕಾಸಿನ ಅನುದಾನ ಪಾವತಿ ಮಾಡಿರುವುದು ಬೆಳಕಿಗೆ ಬಂದಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group