spot_img
spot_img

ಬಿಜೆಪಿ ದುರಾಡಳಿತದಿಂದ ಬೇಸತ್ತ ಜನತೆ – ಖಂಡ್ರೆ

Must Read

- Advertisement -

ಬೀದರ – ಬಿಜೆಪಿಯ ದುರಾಡಳಿತದಿಂದ ಜನರು ಬೆಸತ್ತಿದ್ದರು ಹೀಗಾಗಿ ನಮ್ಮ‌ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಅಧಿಕಾರ ದುರುಪಯೋಗ ಅಟ್ಟಹಾಸದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆ ಗೆಲುವಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅವನತಿಯತ್ತ ಸಾಗಿದೆ. ಈ ಚುನಾವಣೆಯಿಂದ ಬೀದರ್ ನಲ್ಲಿ ಬಿಜೆಪಿ ಪಕ್ಷ ಅಂತ್ಯವಾಗಲಿದೆ ಎಂದರು.

ಇಂದಿನಿಂದ ಬೇರು ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಿ ಮುಂಬರುವ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿಯವರು ವೈಯಕ್ತಿಕವಾಗಿ ಟೀಕೆಗಳನ್ನು ಮಾಡಿದ್ದರು ಅವರು ಮಾಡಿದ ಟೀಕೆಗೆ ಮತದಾರ ಕಿವಿಗೊಟ್ಟಿಲ್ಲ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಲ್ಲಿಯೆ ವಾಸ್ತವ್ಯ ಮಾಡಿದರು ಪ್ರಯೋಜನ ವಾಗಿಲ್ಲ. ಹಣ ಬಲ ತೋಳ್ಬಲದ‌ ಮೂಲಕ ಬಿಜೆಪಿ ಚುನಾವಣೆ ಮಾಡಲು ಹೊರಟಿತ್ತು ಆದರೂ ಪ್ರಯೋಜನ ವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನುಡಿದರು.

- Advertisement -

ಇತ್ತ ಕಾಂಗ್ರೆಸ್ ವಿಜೇತ ಅಭ್ಯರ್ಥಿ ಭೀಮರಾವ್ ಪಾಟೀಲ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಚುನಾವಣೆಯಲ್ಲಿ ಬಿಜೆಪಿಯವರು ಸೀರೆ ಹಂಚಿದರು ಈಗ ಅವೇ ಸೀರೆಗಳನ್ನು ಪ್ರಭು ಹಾಗೂ ಖೂಬಾ ಅವರು ಉಟುಗೊಂಡು ಟಿಕಾ ಹಚ್ಚಿಕೊಂಡು ಮನೆಯಲ್ಲಿ ಇರಲಿ ಎಂದು ವೈಯಕ್ತಿಕ ಟೀಕೆಗಿಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕಾರ್ಯಕರ್ತರೇ, ನಾಯಕರ ದಾಳಗಳಾಗದೆ ಜಾಗೃತರಾಗಿರಿ.

ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಎಚ್ಚರಿಕೆ.ಕಾರ್ಯಕರ್ತರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಸಲಹೆ. ನಿಮ್ಮನ್ನ ರಾಜ್ಯ ಸರ್ಕಾರ ತಮ್ಮದಿದೆ ಆದ್ದರಿಂದ ನಿಮಗೆ ರಕ್ಷಣೆ ನೀಡುತ್ತದೆ ಏನೂ...
- Advertisement -

More Articles Like This

- Advertisement -
close
error: Content is protected !!
Join WhatsApp Group