spot_img
spot_img

ಯಮಕನಮರ್ಡಿಯಲ್ಲಿ ಜನ ಬದಲಾವಣೆ ಬಯಸಿದ್ದಾರೆ; ಈರಣ್ಣಾ ಕಡಾಡಿ

Must Read

- Advertisement -

ಬೆಳಗಾವಿ: ಪರಿವರ್ತನೆ ಎನ್ನುವುದು ಜಗತ್ತಿನ ನಿಯಮ.‌ ಆದರೆ ಇಲ್ಲಿಯವರು ಬದಲಾವಣೆ ಆಗಲು ಸಾಧ್ಯ ಇಲ್ಲ ಎಂದುಕೊಂಡಿದ್ದಾರೆ. ಆದರೆ ಯಮಕನಮರಡಿಯಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದು ಈರಣ್ಣಾ ಕಡಾಡಿ ಅವರು ತಿಳಿಸಿದ್ದಾರೆ.

ಯಮಕನಮರಡಿ ಕ್ಷೇತ್ರದಲ್ಲಿ ನಡೆದ ಬಿಜೆಪಿ ಎಸ್.ಟಿ ಸಮಾವೇಶದಲ್ಲಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು,  2023ರ ಚುನಾವಣೆಯಲ್ಲಿ ನಾವು ಗೆದ್ದು ಮೋದಿಯವರ ಕೈ ಬಲಪಡಿಸಬೇಕು. ಡಬಲ್ ಎಂಜಿನ್ ಸರ್ಕಾರ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದೆ.‌ ಆದರೆ ಡಬಲ್ ಎಂಜಿನ್ ಸರ್ಕಾರದ ಯೋಜನೆಗಳು ಇಲ್ಲಿಯ ಜನರಿಗೆ ಸಿಕ್ಕಿಲ್ಲ. ಸರ್ಕಾರದ ಯೋಜನೆಯಿಂದ ಇಲ್ಲಿನ ಜನರು ವಂಚಿತ ಆಗಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಯಮಕನಮರಡಿಯಿಂದಲೂ ಬಿಜೆಪಿಗೆ ಜಯ ಸಿಗಬೇಕು. ಆಗ ಸರ್ಕಾರದ ಹೆಚ್ಚು ಯೋಜನೆಗಳು ನಿಮಗೆ ಸಿಗಬಹುದು. ಪ್ರತಿ ಬೂತ್ ಮಟ್ಟದಲ್ಲಿಯೂ ಬಿಜೆಪಿಗೆ ಹೆಚ್ಚು ಹೆಚ್ಚು ಮತ ಬರುವ ನಿಟ್ಟಿನಲ್ಲಿ ಕೆಲಸ ಆಗಬೇಕು ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ತಿಳಿಸಿದರು.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group