ದೊಡವಾಡ(ಬೈಲಹೊಂಗಲ):ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜೊತೆಗೆ ಕಲಿಕೆಯಲ್ಲಿಯೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಬೈಲಹೊಂಗಲ ಬಿ ಆರ್ ಪಿ ಅಜ್ಜಪ್ಪ ಅಂಗಡಿ ಹೇಳಿದರು.
ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಿನ್ನೆ ಸಂಜೆ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಸ್ಕೌಟ್ಸ್ ಅಂಡ್ ಗೈಡ್ಸ್ ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಜೊತೆಗೆ ಪರಿಸರ ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಈಗಾಗಲೇ ಸುಮಾರು ೨೧೬ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ರೂಪಿಸುವ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ನಿರ್ವಹಿಸುತ್ತಿದೆ ಹಾಗಾಗಿ ಎಲ್ಲ ವಿದ್ಯಾರ್ಥಿಗಳು ಸ್ಕೌಟ್ಸ್ ಅಂಡ್ ಗೈಡ್ಸ್ ಸೇರುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಎಂದರು.
ಸ್ಕೌಟ್ಸ್ ಗೈಡ್ಸ್ ಘಟಕ ಉದ್ಘಾಟಿಸಿ ಮಾತನಾಡಿದ ಕಾಡಾ ಅಧ್ಯಕ್ಷ, ಮಾಜಿ ಶಾಸಕ ವಿ ಅಯ್ ಪಾಟೀಲ, ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಮೇಲೆ ಸದಾ ಅಭಿಮಾನ ಹೊಂದಿರಬೇಕೆಂದೂ,ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಆಕರ್ಷಿತರಾದರೆ ಮಾತ್ರ ಉಜ್ವಲ ಭವಿಷ್ಯ ಸಾಧ್ಯ ಎಂದು ತಮ್ಮೆಲ್ಲರ ಭವಿಷ್ಯ ಉಜ್ವಲ ಆಗಲೆಂದೂ ಶುಭ ಹಾರೈಸಿದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ನವಲಗುಂದ ಶಂಕರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ ಎಚ್ ಹೂಗಾರ ಮಾತನಾಡಿ,ಈ ದೇಶದಲ್ಲಿ ಜ್ಞಾನಕ್ಕೆ ವಿಶೇಷ ಸ್ಥಾನವಿದ್ದು, ಜ್ಞಾನವು ದೇಶದ ಸಂಪತ್ತಾಗಿದೆ. ದೇಶದ ಸಂಸ್ಕೃತಿ ಪರಂಪರೆಯನ್ನು ಪರಿಚಯಿಸುವ ಶಿಕ್ಷಣ ಇಂದಿನ ಅಗತ್ಯವಾಗಿದೆ. ಜ್ಞಾನ ವೃದ್ಧಿಯಾದಾಗ ಅಜ್ಞಾನದ ಕತ್ತಲೆ ದೂರವಾಗುತ್ತದೆ. ತಂದೆತಾಯಿ ಗುರುಹಿರಿಯರ ಮಾರ್ಗದರ್ಶನದಿಂದ ಜೀವನದಲ್ಲಿ ಯಶಸ್ವಿಯಾಗಬಹುದು ಎಂದು ಮಕ್ಕಳನ್ನುದ್ದೇಶಿಸಿ ಮಾತನಾಡಿದರು.
ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿದರು, ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಹಿರೇಮಠದ ಜಡಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಸಾನ್ನಜಧ್ಯವನ್ನು ಕಲ್ಲೂರ ಆರೂಢ ಆಶ್ರಮದ ಮಾತೋಶ್ರೀ ಲಲಿತಮ್ಮ ತಾಯಿಯವರು,ಅಧ್ಯಕ್ಷತೆಯನ್ನು ಎಸ್ ಎಸ್ ಎಜುಕೇಶನ್ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷ ಜಿ ಅಯ್ ಅಂಗಡಿ ವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಆಟೋಟಗಳಲ್ಲಿ,ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು, ನಂತರ ನಡೆದ ಶಾಲಾ ಮಕ್ಕಳ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಜನರ ಮನಸೂರೆಗೊಂಡಿತು.
ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ ಎಸ್ ಹೊರಕೇರಿ,ಊರಿನ ಗಣ್ಯರಾದ ವೀರೇಂದ್ರ ಸಂಗೊಳ್ಳಿ, ಬಸವರಾಜ ಮುರಗೋಡ, ನಿಂಗಪ್ಪ ಚೌಡಣ್ಣವರ,ಮಹಾಬಲೇಶ್ವರ ತುಪ್ಪದ, ವಿಠಲ ಗಾಬಿ, ಬಿ ಬಿ ಅಸುಂಡಿ, ರುದ್ರಪ್ಪ ಕೋಟಗಿ, ಉದಯ ಕೊಟಬಾಗಿ, ಗಿರೀಶ ಧಾರವಾಡ, ಶ್ರೀಶೈಲ ಚೌಡಣ್ಣವರ, ಗುರುಪುತ್ರ ಅರಳಿಮರದ,ದಿಲಾವರಸಾಬ ನದಾಫ್, ರಾಜೇಂದ್ರ ಕರಿ ಸೇರಿದಂತೆ ಶಾಲಾ ಶಿಕ್ಷಕ ವೃಂದ,ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಗುರು ಅರಳಿಮರದ
ಜವಳಿ ವ್ಯಾಪಾರಸ್ಥರು,ಹಾಗೂ ಹವ್ಯಾಸಿ ಬರಹಗಾರರು ದೊಡವಾಡ.