- Advertisement -
ಬೀದರ – ಸುಮಾರು 25 ರಿಂದ 30 ಜನರ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿದ್ದ ಮಂಗಗಳನ್ನು ಗ್ರಾಮಸ್ಥರು ಹಿಡಿದು ಕಾಡಿಗೆ ಬಿಟ್ಟು ನಿಟ್ಟುಸಿರು ಬಿಟ್ಟಿದ್ದಾರೆ.
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಘಟನೆ ನಡೆದಿದ್ದು ಮಂಗಗಳ ದಾಳಿಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಂಗಗಳ ನಿಯಂತ್ರಣ ಮಾಡುವಲ್ಲಿ ಗ್ರಾಮಪಂಚಾಯತ್ ನಿರ್ಲಕ್ಷ್ಯ ತಾಳಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.