ಟಿ-೨೦ ಗೆದ್ದ ಭಾರತ ; ಪ್ರಧಾನಿ ಮೋದಿ ಶ್ಲಾಘನೆ

Must Read

ಹೊಸದೆಹಲಿ – ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-೨೦ ಫೈನಲ್ ಪಂದ್ಯವನ್ನು ಗೆದ್ದಿರುವ ಭಾರತ ತಂಡವನ್ನು ಪ್ರಧಾನ ಮಂತ್ರಿ ಮೋದಿ ಅಭಿನಂದಿಸಿದ್ದಾರೆ. ರೋಹಿತ್ ಶರ್ಮಾ ಅವರ ಅದ್ಭುತ ನಾಯಕತ್ವ ಹಾಗೂ ವಿರಾಟ್ ಕೊಹ್ಲಿಯವರ ಅದ್ಭುತ ಆಟವನ್ನೂ ಅವರು ಶ್ಲಾಘಿಸಿದ್ದಾರೆ.

ಜೂ.೩೦ ರಂದು ಭಾರತ ತಂಡದೊಂದಿಗೆ ಫೋನ್ ನಲ್ಲಿ ಮಾತನಾಡಿದ ಮೋದಿಯವರು ಭಾರತ ಟಿ-೨೦ ವಿಶ್ವಕಪ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪಂದ್ಯದ ನಂತರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ- ೨೦ ಪಂದ್ಯಗಳಿಂದ ನಿವೃತ್ತಿ ಘೋಷಿಸಿದರು. ಮೋದಿಯವರು ಹಾರ್ದಿಕ್ ಪಾಂಡ್ಯ ಅವರ ಕೊನೆಯ ಓವರನ್ನೂ ಹೊಗಳಿದ್ದು, ದಕ್ಷಿಣ ಆಫ್ರಿಕಾ ಆಟಗಾರ ಡೆವಿಡ್ ಮಿಲ್ಲರ್ ಅವರನ್ನು ಔಟ್ ಮಾಡಿದ ಸೂರ್ಯಕುಮಾರ ಯಾದವ ಅವರ ಬೌಂಡರಿ ಲೈನ್ ನ ಅದ್ಭುತ ಕ್ಯಾಚನ್ನೂ ಕೂಡ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ತಂಡಕ್ಕೆ ರಾಹುಲ್ ದ್ರಾವಿಡ ಅವರ ತರಬೇತಿ ಸಿಕ್ಕಿದ್ದು ದ್ರಾವಿಡ ಅವರಿಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂಬುದಾಗಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group