ಕವನ

Must Read

ಹುಡುಕುತ್ತಿರುವೆ
———————-
ಸೂರ್ಯ ಉದಯಿಸುತ್ತಾನೆ
ಈಗ ಕೋಳಿ ಕೂಗುವದಿಲ್ಲ.
ಓಡುತ್ತಿದ್ದಾರೆ ಬದುಕಿನ ಬೆನ್ನ ಹತ್ತಿ
ರೈಲು ಬಸ್ ಆಟೋದಲ್ಲಿ ಪಯಣ
ಕಾರ್ಖಾನೆಗೆ ಜನರ ಜಂಗುಳಿ.
ಕೈಯಲ್ಲಿ ಮೊಬೈಲ್ ವಾಟ್ಸ್ ಆಪ್
ಜನರು ಮುಖ ಕೆಳಗಿಟ್ಟು ಬದುಕುತ್ತಾರೆ.
ನಗುವುದೇ ಕಡಿಮೆ .
ದುಗುಡ ತಳಮಳ ಆತಂಕ .
ದೇಶದಲ್ಲಿ ಬರ ಬಡತನ
ಸುದ್ದಿ ಮಾಧ್ಯಮಗಳ ಅಬ್ಬರ .
ದಿನಸಿ ಅಂಗಡಿಯ ಮುಂದೆ ಸಾಲು.
ಗುಡಿ ಮಸೀದೆ ಚರ್ಚು ಭಿಕ್ಷುಕರು.
ಜಾತ್ರೆ ಹಬ್ಬ ಮೊಹರಮ್ಮಿನ ಕುಣಿತ.
ಕಳೆದುಕೊಂಡಿದ್ದೇವೆ ಜೀವ ಜಾಲವ
ಕಾಣುತ್ತಿಲ್ಲ ಸಂತಸ ನೆಮ್ಮದಿ ದಿನಗಳು.
ಹುಡುಕುತ್ತಿರುವೆ ನನ್ನ ನಾನು
ಹೊಲದ ಗದ್ದೆಯ ಮಧ್ಯೆ
ಅಚ್ಚ ಹಸುರಿನ ಪೈರು
ಕೆರೆ ತುಂಬಿದ ನೀರು .
ಪಕ್ಷಿ ಇಂಚರ ಧ್ವನಿಯ ಕೊರಳು .
ಹುಡುಕುತ್ತಿರುವೆ ಹುಡುಕುತ್ತಲೇ ಇರುವೆ
—————————————-
ಡಾ.ಶಶಿಕಾಂತ.ಪಟ್ಟಣ, ಪುಣೆ

1 COMMENT

Comments are closed.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group