ಕವನ : ಬೇಕೆನಗೆ ಸಾಂಗತ್ಯ

Must Read

ಬೇಕೆನಗೆ ಸಾಂಗತ್ಯ

ನೀ ಬಂದ ಗಳಿಗೆ
ಸಂಭ್ರಮದ ಹೋಳಿಗೆ

ನೋವೆಲ್ಲಾ ಮರೆಸಿ
ಕರುಳ ಸಂಬಂಧ ಆದರಿಸಿ.

ನನ್ನದ್ದೆಲ್ಲವ ತೊರೆದು
ನಿನ್ನಲ್ಲಿ ನಾ ಬೆರೆತು
ಸ್ವರ್ಗ ಧರೆಗಿಳಿದಂತೆ
ನಿನ್ನಾರೈಕೆಯ ಹೆಗಲ ಹೊತ್ತು.

ಬೆಳೆಸಿದೆ ಬಾಂಧವ್ಯ
ಬೇಕು ಬೇಡಿಕೆಗಳ ಪೂರೈಸಿ
ಉರುಳುತಿದೆ ದಿನಮಾನ
ನಾನೇನಾ ಎಂಬ ಅನುಮಾನ.

ದಡ ಸೇರಿಸುವ ಹೊಣೆ
ಮುಡಿಗೇರಿದ ಬವಣೆ
ಹಗಲು ಇರುಳಿನ ಪರಿವೆಯಿಲ್ಲ
ಮುಗುಳು ನಗೆಯ ಮುನಿಸೆಲ್ಲ.

ಬೆಳೆದು ನೀನಾದೆ ಹೆಮ್ಮರ
ಮೈದಳೆದ ಹೊಸ ಆಶಯದಿ
ಬರಿದು ಕಾನನ ನಾನು
ಮುಕ್ಕಿ ತಿನ್ನುತಿಹ ಒಂಟಿತನ.

ಕೇಳುವವರಿಲ್ಲದ ಬೆಂಗಾಡು
ಮೊದಲಿತ್ತಿದು ನಂದನ
ಕೈಚೆಲ್ಲಿದೆ ನಿರ್ಲಕ್ಷಿಸಿ
ನೇವರಿಸುವರಿಲ್ಲದ ಕೊರಗು.

ಬೇರೇನೂ ಬೇಡ
ಆಲಂಗಿಸಿ ಬಿಡೊಮ್ಮೆ
ಆದರಿಸಿ ಸಂತೈಸೊಮ್ಮೆ
ಕರುಣೆ ಅನುಬಂಧದಿ ನೋಡ.

ಅಗಲಿದಾಗ ಕಣ್ಣೀರು ಬೇಡ ಎನಗೆ
ಹೋಗುವ ಮುನ್ನ ಅಲಿಂಗನದ ಬಯಕೆ
ಸಾಂಗತ್ಯ ಗೀತೆ ಗಡಿಬಿಡಿ
ಪ್ರೀತಿ ತೋಟದ ಹೂವು ಅರಳಲು ಬಿಡಿ.

ರೇಷ್ಮಾ ಕಂದಕೂರ
ಶಿಕ್ಷಕಿ
ಸಿಂಧನೂರು

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group