ಕವನ : ಬಿಡದಿರಿ ನಮ್ಮತನ

Must Read

ಬಿಡದಿರಿ ನಮ್ಮತನ

ತನ್ನತನವ ಬಿಟ್ಟು
ತನ್ನದಲ್ಲದಕೆ ಹರಿ ಬಿಟ್ಟು
ಕನ್ನಿಕೆಯ ಹಿಂದೋಡಿ
ಕುನ್ನಿಯಂತಾಗಬೇಕೆ ಮೋಡಿ.

ನಮ್ಮೊಳಗಿನದ ಸರಿಸಿ
ಪರರದಕೆ ಮೋಹಿಸಿ
ದಾಹ ತೀರಿದ ಮೇಲೆ
ಎಡ ಬಿಡಂಗಿಯಾಗಬೇಕೆ.

ಹರಸುವರು ಮೊದಲು
ಹೌಹಾರ ಬೇಡ
ಆರಿಸಿ ನೋಡೋಮ್ಮೆ
ತಾರಸಿಯ ಹತ್ತಿಸಿ ಒದೆಯುವರು.

ಮತ್ತಿನ ರಂಗು ತೋರಿಸಿ
ರಂಗಿನಾಟ ಆಡುವರು
ಕುಣಿಸುತಿಹರು ಮನ ಬಂದಂತೆ
ದಂಗಾಗದಿರು ಹಂಗು ತೊರೆದು.

ನೆಪ ಒಡ್ಡಿ ಕರೆವರು
ಕೊರಳ ಕೊಯ್ಯುವರು
ಪರ ಮೋಹ ತರವಲ್ಲ
ಓರೆ ಕೊರೆಗಳು ಸಹಜ ತಿದ್ದಿ ಮುಂದೆ ನಡೆ.

ರೇಷ್ಮಾ ಕಂದಕೂರ
ಶಿಕ್ಷಕಿ
ಸಿಂಧನೂರು

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group