ಕವನ : ಲಿಂಗಾಯತ ಸಾಫ್ಟವೇರ್ ಕರಪ್ಟಾಗಿದೆ

Must Read

ಲಿಂಗಾಯತ ಸಾಫ್ಟ್‌ವೇರ್ ಕರಪ್ಟಾಗಿದೆ…

ಕ್ಷಮಿಸಿ
ವಚನ ಶಾಸ್ತ್ರ ಲಿಂಗಾಯತ
ಸಾಫ್ಟ್‌ವೇರುಗಳೆಲ್ಲಾ ಕರಪ್ಟಾಗಿವೆ

ಮೊನ್ನೆಮೊನ್ನೆ ಹಾಕಿಸಿದ
ಶರಣರ ಮದರಬೋಡಿಗೆ
ಮೆಮೊರಿ ಆಪ್ಷನ್ನೇ
ತೆಗೆದುಹಾಕಲಾಗಿದೆಯಂತೆ

ಈಗ ಅನುಭವ
ಸಾಫ್ಟ್‌ವೇರೂ
ಬರುವುದೇ ಹೀಗಂತೆ!

ಬಸವ ಧರ್ಮ
ಹೊಸ ಲ್ಯಾಪ್‌ಟಾಪಿಗೆ
ಬ್ಯಾಟರಿ ಡ್ರೈವೇ ಇಲ್ಲ

ಬಸವ ಭಕ್ತರ
ಮೇನ್‌ಸ್ವಿಚ್ಚಿನೊಂದಿಗೆ
ಕನೆಕ್ಷನ್ನೂ ಇಲ್ಲ

ಅಲ್ಲದೆ
ಯಾವ ನೆನಪೂ ಇಲ್ಲ
ಮೆಮೋರಿ ಲಾಸಾಗಿದೆ,
ಎಲ್ಲವೂ ಮರೆತಿದೆ…

ಅರಿವಳಿಕೆ ತಿನ್ನುತ್ತ
ಆಪರೇಷನ್ ಟೇಬಲ್ಲಿನ ಮೇಲೆ
ಒಂಬತ್ತು ಶತಮಾನ
ಕಳೆದದ್ದೂ ನೆನಪೇ ಇಲ್ಲ

ಇದೀಗ
ವಚನ ದರ್ಶನ ವೈರಸ್
ಒಳಗೆ ನುಸುಳಿದೆ.
ಸಿಸ್ಟಮ್ ಕೆಟ್ಟು ಹೋಗಿದೆ

ಮಠ ಸ್ವಾಮಿಗಳ
ಫೈಲುಗಳಲ್ಲೂ,
ಅಗ್ರಹಾರದ ಮುದ್ರೆ ಬಿದ್ದಿದೆ
ಫೋಲ್ಡರುಗಳಲ್ಲೂ
ಶರಣರು ವಿಂಡೋ
ಬಂದಾಗಿದೆ..

ಇನ್ನು
ವೈರಸ್ ಗಾರ್ಡ್‌ಗಳಾಕಿ
ಉಪಯೋಗವಿಲ್ಲ..

ಮೆಮೋರಿ ಮರೆತ
ನಿವೃತ್ತಿ ಅಧಿಕಾರಿಗಳ
ಮೊದಲು ತೆಗೆದು
ಹಾಕಬೇಕು..

ಲಿಂಗಕ್ಕೆ ವೈರಸ್ ಹತ್ತದ
ಸಾಫ್ಟ್‌ವೇರನ್ನು ಹಾಕಬೇಕು

ಇಲ್ಲವೆಂದರೆ

ನಮ್ಮ ಗುರು ಜಂಗಮ ಅಳವಡಿಸಿ
ಲ್ಯಾಪು
ಮತ್ತದರ ಟಾಪು
ಎರಡನ್ನೂ ಬದಲಿಸಬೇಕು.
_________________________
ಡಾ ಶಶಿಕಾಂತ ಪಟ್ಟಣ ರಾಮದುರ್ಗ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group