ಕವನ : ಸೈತಾನನ ಸಂತತಿ !!

Must Read

ಸೈತಾನನ ಸಂತತಿ!!

ಬಟ್ಟೆಯ ಬಿಚ್ಚಿಸಿ ನೋಡಿದರೆ
ಧರ್ಮವು ಕಾಣುವುದೇ…!

ನಡೆ ನುಡಿ ಸಹೃದಯಗಳಲಿ
ಅಡಗಿದೆ ಮಾನವ ಧರ್ಮ…

ಧರ್ಮದ ಅಮಲು ನೆತ್ತಿಗೇರಿಸಿ
ನರ್ತನ ಮಾಡುವ ಅಧಮರೇ

ಕ್ರೂರ ಮನದ ಕೊಲೆಗಡುಕ
ಸೈತಾನನ ಸಂತತಿಯವರೇ…

ಅರ್ಥವಾಗದು ದುರುಳ ಜನಕೆ
ಕರುಳ ಸಂಬಂಧಗಳ ನೋವು

ಕಲಿಸುವುದು ಕಾಲವೇ ನಿಮಗೆ
ಕೊಳಕು ಮನದ ಕ್ರಿಮಿಗಳೇ…

ಪಹಲ್ಗಮ್ ನಲ್ಲಿ ನೆತ್ತರು ಸುರಿಸಿ
ಬಲಿದಾನವಾದ ಸಹೋದರರೇ

ಭಗವಂತ ಚಿರಶಾಂತಿ ನೀಡಲಿ
ನಿಮಗಿದೋ ಸಾವಿರ ನಮನ…

ಎ.ಎಸ್.ಗಡದವರ(ಅಡವೀಶ)
ಹಿ.ಪ್ರಾ.ಕ.ಹೆ.ಮ.ಆಶ್ರಮ ಶಾಲೆ
ದೇಶನೂರ – 591147
ತಾ:ಬೈಲಹೊಂಗಲ ಜಿ:ಬೆಳಗಾವಿ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group