spot_img
spot_img

ಕವನ

Must Read

- Advertisement -

ಬೇಕಿಲ್ಲ ಸಮತೆ ಕ್ರಾಂತಿ

ಎಂದೂ ಸೋಲದ
ಆರ್ಯ ಪುರುಷ
ವೀರ ಶೂರ ಕ್ಷತ್ರಿಯ
ಶ್ರೀ ರಾಮಚಂದ್ರ ಮೊನ್ನೆ
ಆಯೋಧ್ಯೆಯಲ್ಲಿಯೇ
ಸೋತು ಬಿಟ್ಟ
ಅವನೊಬ್ಬ ಮಹಾಪುರುಷ
ಮನುಷ್ಯ ನಿರ್ಮಿತ
ಜಾತಿ ಮತ ಧರ್ಮಗಳ
ಸೀಮೆ ದಾಟಿದ ಯೋಧ
ಶ್ರೀರಾಮನ ಶಾಪವೊ
ಕೋಪವೊ ಗೊತ್ತಿಲ್ಲ
ಇವರೂ ಸೋತು ಬಿಟ್ಟರು
ಈಗ ಪುರಿಯಲ್ಲಿ
ಜಗನ್ನಾಥನ ಸರದಿ
ಪಾಪ ಅವನಿಗೂ
ಭಯ ಭೀತಿ
ಅವರು ಇಲ್ಲಿ ಗೆದ್ದಿದ್ದಾರೆ
ಬುದ್ಧ ಬಸವ ಬಾಪು
ಅಂಬೇಡ್ಕರ ಎಂದೋ
ಸೋತು ಬಿಟ್ಟರು
ಸರ್ವರಿಗೂ ಸಮಪಾಲು
ಸರ್ವರಿಗೂ ಸಮಬಾಳು
ಇದು ಭಾಷಣ ಲೇಖನ
ಗೋಡೆಯ ಮಾತು
ಬದಲಾಗುವದಿಲ್ಲ ಭಾರತ
ಬೇಕಿಲ್ಲ ಸಮತೆ ಕ್ರಾಂತಿ

ಡಾ. ಶಶಿಕಾಂತ ಪಟ್ಟಣ ರಾಮದುರ್ಗ

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ತಲೆಬಾಗು ಗುರುಗಳಿಗೆ ಗಣ್ಯರಿಗೆ ಮಾನ್ಯರಿಗೆ ಶಿರಬಾಗು ಹಿರಿಯರಿಗೆ ಹೆತ್ತವರಿಗೆ ಶರಣಾಗು ಸಂಪೂರ್ಣ ಮದವಳಿದು ದೈವಕ್ಕೆ ಬಾಗಿದವ ಬಾಳುವನು - ಎಮ್ಮೆತಮ್ಮ ಶಬ್ಧಾರ್ಥ ಗಣ್ಯರು = ಗಣನೀಯವಾದವರು ಮಾನ್ಯರು = ಮನ್ನಣೆಗೆ ಪಾತ್ರರಾದವರು ತಾತ್ಪರ್ಯ ಗುರುಗಳಲ್ಲಿ‌ ಗಣ್ಯರಲ್ಲಿ‌ ಮಾನ್ಯರಲ್ಲಿ‌‌...
- Advertisement -

More Articles Like This

- Advertisement -
close
error: Content is protected !!
Join WhatsApp Group