ಕವನ : ನಗಬೇಕು

Must Read

ನಗಬೇಕು

ನಗಬೇಕು ಅಳುವ ಮರೆತು
ಮುಂದೆ ಕಾದಿದೆ ಜೀವನ
ಕಷ್ಟ ನಷ್ಟ ಸಾವು ನೋವು
ದೈವ ವಿಧಿಸಿದ ಬಂಧನ

ಅತ್ತು ಅತ್ತು ಬಿಕ್ಕಬೇಡ
ಚಿಮ್ಮಲೊಮ್ಮೆ ಚಿಲುಮೆ
ಎಲೆ ಉದುರಿದ ಕಾಂಡದಿ
ಹಸಿರು ಚಿಗುರು ಚೇತನ

ನಕ್ಕುಬಿಡು ದುಃಖ ಮರೆತು
ಸೊಗಸು ಸಂತಸ ಸವಿ ಮನ
ದುಗುಡ ದೂರವಾಗಿ ತೊಲಗಲಿ
ಶಾಂತಿ ಪ್ರೀತಿ ಪಾವನ

ಕಿಟಕಿಯಾಚೆ ರವಿಯ ಬೆಳಕು
ಸಂಜೆ ಚಂದ್ರನ ಸ್ಪಂದನ
ನಗೆಯು ಮುಖದಿ ಮಾಸದಿರಲಿ
ಬಾಳು ನಿತ್ಯ ನೂತನ

_________________________
ಡಾ.ಶಶಿಕಾಂತ ಪಟ್ಟಣ, ರಾಮದುರ್ಗ

Latest News

ಕಂಟೇನರ್ ಹಣದ ಮೂಲವೇನು ? ಎಸ್ಆಯ್ ಟಿ ತನಿಖೆಯಾಗಲಿ – ಈಶ್ವರ ಖಂಡ್ರೆ

ಬೀದರ - ರಾಜ್ಯದ ಮಹಾರಾಷ್ಟ್ರ ಗಡಿಯಲ್ಲಿ 400 ಕೋಟಿ ಹಣ ತುಂಬಿರುವ ಕಂಟೇನರ್ ಕಳುವಾಗಿರುವ ಹಣದ ಮೂಲವೇನು ? ಅದು ಎಲ್ಲಿಂದ ಬಂದಿತು, ಎಲ್ಲಿಗೆ ಹೋಗುತ್ತಿತ್ತು...

More Articles Like This

error: Content is protected !!
Join WhatsApp Group